ಅಂಕೋಲಾ ಗುಡ್ಡ ಕುಸಿತ: ರಾಜ್ಯಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ದೇವೇಗೌಡ ವಾಗ್ದಾಳಿ

Sampriya
ಗುರುವಾರ, 25 ಜುಲೈ 2024 (14:05 IST)
ನವದೆಹಲಿ: ಅಂಕೋಲಾ ಗುಡ್ಡ ಕುಸಿತದ ಬಗ್ಗೆ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಜುಲೈ 16 ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದುವರೆಗೆ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕೇರಳದ ಲಾರಿ ಚಾಲಕ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಿದರ್ಶನ. ಕರ್ನಾಟಕ ಸರ್ಕಾರ ರಾಜ್ಯದ ಪರಿಸ್ಥಿತಿ ಬಗ್ಗೆ ನಿರಾಸಕ್ತಿ ತೋರುತ್ತಿದೆ. ಹೆಚ್​​ಡಿ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆ ಹೋಗುವವರೆಗೂ ರಾಜ್ಯಸ ರ್ಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ್ದು ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿತು.

ಗೌಡರ ಹೇಳಿಕೆಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಘಟನೆ ಸಂಭವಿಸಿ 9 ಜನರು ಪ್ರಾಣ ಕಳೆದುಕೊಂಡಿದ್ದರೂ ಆರು ದಿನಗಳ ಕಾಲ ಯಾವುದೇ ರಾಜ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಲಿಲ್ಲ. ಇಡೀ ಬೆಟ್ಟವೇ ಕೆಳಗೆ ಜಾರಿತ್ತು. ನಾನು ರಾಜಕೀಯದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಆದರೆ ಕೇಂದ್ರ ಉಕ್ಕು ಸಚಿವರು ಭೇಟಿ ನೀಡಿದ ಬಳಿಕವಷ್ಟೇ ಅಗ್ನಿಶಾಮಕ ಹಾಗೂ ಮಿಲಿಟರಿ ತಂಡವನ್ನು ಕಳುಹಿಸಲಾಗಿದೆ ಎಂದರು.

ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಪ್ರಧಾನ ಮಂತ್ರಿಗಳ ಕಾರ್ಯಾಲಯವು, ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಸೇನಾ ಪಡೆಯನ್ನು ಕಳುಹಿಸಿದೆ. ಈ ಪಡೆಯು ಭಾನುವಾರ ಮಧ್ಯಾಹ್ನ ಶಿರೂರಿಗೆ ತಲುಪಲಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments