Select Your Language

Notifications

webdunia
webdunia
webdunia
webdunia

ಗದ್ದುಗೆ ಏರಿದ ಕಾಂಗ್ರೆಸ್‍ಗೆ ಅಣ್ಣಾಮಲೈ ಅಭಿನಂದನೆ

ಗದ್ದುಗೆ ಏರಿದ ಕಾಂಗ್ರೆಸ್‍ಗೆ ಅಣ್ಣಾಮಲೈ ಅಭಿನಂದನೆ
ಚೆನ್ನೈ , ಸೋಮವಾರ, 15 ಮೇ 2023 (13:30 IST)
ಚೆನ್ನೈ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ  ಗೆಲುವು ಸಾಧಿಸಿದ ಕಾಂಗ್ರೆಸ್ಗೆ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಭಿನಂದನೆ ಸಲ್ಲಿಸಿದ್ದಾರೆ.
 
ಕರ್ನಾಟಕದಲ್ಲಿ ಕಾಂಗ್ರೆಸ್ ಜನಾದೇಶವನ್ನು ಪಡೆದಿದೆ. ಜನರಿಗೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಮತ ನೀಡಿದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪುಟಿದೇಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಪ್ರಚಾರದ ವೇಳೆ ಬಿಜೆಪಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿದೆ. ಬಿಜೆಪಿಗೆ 65 ಸ್ಥಾನಗಳು ಮಾತ್ರ ಲಭಿಸಿವೆ. ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ