Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್

Webdunia
ಮಂಗಳವಾರ, 28 ಸೆಪ್ಟಂಬರ್ 2021 (11:39 IST)
ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಉಂಟಾಗಿದೆ, ಹಿರಿಯ ನಾಯಕರಿಬ್ಬರು ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.

ಕೇರಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಂ. ಸುಧೀರನ್ ಎಐಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಎರಡು ದಿನಗಳ ಹಿಂದೆ ಕೇರಳ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಎಐಸಿಸಿ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅವರ ಬೇಡಿಕೆಗೆ ಕಮಾಂಡ್ ಸ್ಪಂದಿಸದ ಹಿನ್ನೆಲೆಯಲ್ಲಿ ಪಕ್ಷ ತೊರೆಯಲು ಮುಂದಾಗಿದ್ದಾರೆ.
ಗೋವಾ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಲುಝಿನ್ಹೊಫೆಲಿರೋ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಪಂಜಾಬ್ ನಲ್ಲಿ ಆಂತರಿಕ ಕಲಹ ತಣಿಸಲು ನವಜೋತ್ ಸಿಂಗ್ ಸಿಧು ಬೇಡಿಕೆಯಂತೆ ಅಮರೀಂದರ್ ಸಿಂಗ್ ಅವರನ್ನು ಕೆಳಗಿಳಿಸಿ ಸಿದ್ದು ಆಪ್ತ ಚರಣ್ ಸಿಂಗ್ ಚನ್ನಿ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಆದರೆ, ಚರಣ್ ಸಿಂಗ್ ಮತ್ತು ಸಿಧು ನಡುವೆಯೂ ಸಂಪುಟ ವಿಸ್ತರಣೆ ಬಳಿಕ ಮುನಿಸು ಉಂಟಾಗಿದ್ದು, ಕಾಂಗ್ರೆಸ್ ನಾಯಕರಿಗೆ ಹೊಸ ತಲೆನೋವು ತಂದಿದೆ ಎಂದು ಹೇಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments