Webdunia - Bharat's app for daily news and videos

Install App

ದಾಳಿ ನಡೆದ ಮನೆ ಬಳಿ ಮತ್ತೊಂದು ಸ್ಫೋಟ! ಮಗು ಸಾವು

Webdunia
ಸೋಮವಾರ, 2 ಜನವರಿ 2023 (12:28 IST)
ಶ್ರೀನಗರ : ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿತ್ತು.

ಇಂದು ದಾಳಿ ನಡೆದ ಮನೆ ಬಳಿಯೇ ಇನ್ನೊಂದು ಸ್ಫೋಟ  ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಿನ್ನೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಗ್ರರು ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೂರು ಮನೆಗಳಲ್ಲಿ ದಾಳಿ ನಡೆಸಿದ್ದ ಉಗ್ರರು ನಾಲ್ವರನ್ನು ಕೊಂದಿದ್ದರು. 

ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಇದು ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪವಿದೆ ಎನ್ನಲಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ.

ಗಾಯಗೊಂಡಿರುವ ಐವರ ಪೈಕಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments