ದಾಳಿ ನಡೆದ ಮನೆ ಬಳಿ ಮತ್ತೊಂದು ಸ್ಫೋಟ! ಮಗು ಸಾವು

Webdunia
ಸೋಮವಾರ, 2 ಜನವರಿ 2023 (12:28 IST)
ಶ್ರೀನಗರ : ಭಾನುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿತ್ತು.

ಇಂದು ದಾಳಿ ನಡೆದ ಮನೆ ಬಳಿಯೇ ಇನ್ನೊಂದು ಸ್ಫೋಟ  ಸಂಭವಿಸಿದ್ದು, ಮಗು ಸಾವನ್ನಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಿನ್ನೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಗ್ರರು ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೂರು ಮನೆಗಳಲ್ಲಿ ದಾಳಿ ನಡೆಸಿದ್ದ ಉಗ್ರರು ನಾಲ್ವರನ್ನು ಕೊಂದಿದ್ದರು. 

ಇಂದು ನಡೆದ ಸ್ಫೋಟ ಡ್ಯಾಂಗ್ರಿ ಗ್ರಾಮದಲ್ಲಿ ವರದಿಯಾಗಿದೆ. ಇದು ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪವಿದೆ ಎನ್ನಲಾಗಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ.

ಗಾಯಗೊಂಡಿರುವ ಐವರ ಪೈಕಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ಎಲ್ಲರನ್ನೂ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments