Publish Date: Tue, 28 Jul 2020 (20:15 IST)
Updated Date: Tue, 28 Jul 2020 (20:16 IST)
ಕುದುರೆ ವ್ಯಾಪಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷವಾಗಿದೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ "ಸೇವ್ ಡೆಮಾಕ್ರಸಿ" ಅಭಿಯಾನ ಆರಂಭಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಜೆಡಿ (ಎಸ್) ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಕಾಂಗ್ರೆಸ್ ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು .
ರಾಜಸ್ಥಾನದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಿದ ಎಲ್ಲ ಬಿಎಸ್ಪಿ ಶಾಸಕರಿಗೆ ಅವರು ಆಮಿಷ ಒಡ್ಡಲಿಲ್ಲವೇ? ಇದು ಖರೀದಿಯಲ್ಲವೇ? " ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.