Publish Date: Wed, 10 May 2017 (07:01 IST)
Updated Date: Wed, 10 May 2017 (07:05 IST)
ನವದೆಹಲಿ: ಲಂಚ ಹಗರಣದಲ್ಲಿ ಚೇತರಿಸಿಕೊಳ್ಳುವ ಮೊದಲೇ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್ ಕಾದಿದೆ. ಈ ಬಾರಿ ಐಟಿ ವಿಭಾಗ ಎಎಪಿ ಪಕ್ಷದ ವಿರುದ್ಧ ನೋಟೀಸ್ ಜಾರಿ ಮಾಡಿದೆ.
ಕಾನೂನು ಹೋರಾಟ ಮುಂದುವರಿಸಲು ನೋಟೀಸ್ ಜಾರಿ ಮಾಡಿರುವುದಲ್ಲದೆ, ಎಎಪಿ ಪಕ್ಷದ ಸದಸ್ಯತ್ವ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇದರಿಂದ ಕೇಜ್ರಿವಾಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪಕ್ಷದ ವಿರುದ್ಧ ಶೋಕಾಸ್ ನೋಟೀಸ್ ಜಾರಿ ಮಾಡಿರುವ ತೆರಿಗೆ ಇಲಾಖೆ ‘ನಿಮ್ಮ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು’ ಎಂದು ವಿವರಣೆ ಕೋರದೆ. ಅಲ್ಲದೆ ಪಕ್ಷಕ್ಕೆ ಡೊನೇಷನ್ ನೀಡಿದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಕ್ಕೆ ಪಕ್ಷದ ಸದಸ್ಯತ್ವ ರದ್ದುಗೊಳಿಸಲು ಸೂಚಿಸಿದೆ.
ಇನ್ನೊಂದೆಡೆ ಸಾಮಾಜಿಕ ಹೋರಾಟಗಾರ ಹಾಗೂ ಕೇಜ್ರಿವಾಲ್ ರಾಜಕೀಯ ಗುರು ಅಣ್ಣಾ ಹಜಾರೆ ದೆಹಲಿ ಸಿಎಂ ವಿರುದ್ಧ ಆರೋಪಗಳು ಸಾಬೀತಾದರೆ ಕೇಜ್ರಿವಾಲ್ ವಿರುದ್ಧವೇ ಧರಣಿ ಕೂರುವುದಾಗಿ ಬೆದರಿಕೆ ಹಾಕಿದ್ದಾರೆ. ಇನ್ನೊಂದೆಡೆ ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಮಾಡಿದ ಭ್ರಷ್ಟಾಚಾರ ಆರೋಪವನ್ನು ತನಿಖೆ ಮಾಡಲಾಗುವುದು ಎಂದು ಸಿಬಿಐ ಹೇಳಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ