ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

Sampriya
ಶನಿವಾರ, 1 ನವೆಂಬರ್ 2025 (14:25 IST)
Photo Credit X
ಶ್ರೀಕಾಕುಳಂ: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ಸಂಭವಿಸಿದೆ. ಆಂಧ್ರಪ್ರದೇಶದ ಇತಿಹಾಸ ಪ್ರಸಿದ್ಧ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ.

ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಕಾಲ್ತುಳಿತದಲ್ಲಿ ಅನೇಕ ಭಕ್ತರು ಗಂಭೀರವಾಗಿ ಗಾಯಗೊಂಡರು.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ, ದೇವಾಲಯದ ಸುತ್ತಮುತ್ತ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆ ನಡೆದ ದೇವಾಲಯಕ್ಕೆ ಪೊಲೀಸರು ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಘಟನೆಯ ಬಗ್ಗೆ ಜಿಲ್ಲಾ ಅಧಿಕಾರಿಗಳು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ದೇವಾಲಯದ ಭದ್ರತಾ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು. ಈ ಮಧ್ಯೆ, ಆನಮ್ ರಾಮನಾರಾಯಣ ರೆಡ್ಡಿ ಕಾಲ್ತುಳಿತ ಘಟನೆಯ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವೀರಪ್ಪನ್ ಆಗಿದ್ದಾಗ ಕಾಡು ಸೇಫ್ ಆಗಿತ್ತು: ಅರಣ್ಯ ಸಚಿವರಿಗೆ ರೈತರ ಅಳಲು

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments