Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಮತ್ತೋರ್ವ ಶಂಕಿತ ಉಗ್ರ ಬಂಧನ

Webdunia
ಸೋಮವಾರ, 20 ಸೆಪ್ಟಂಬರ್ 2021 (14:43 IST)
ಮುಂಬೈ, ಸೆ 20 : ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ಹಬ್ಬದ ಸಂದರ್ಭದಲ್ಲಿ ಸ್ಪೋಟ ಮಾಡಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ನಂಟು ಹೊಂದಿರುವ ಅನುಮಾನದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ದಳವು (ಎಟಿಎಸ್) ಮತ್ತೋರ್ವ ಶಂಕಿತ ಉಗ್ರನನ್ನು ಬಂಧನ ಮಾಡಿದೆ.

ಬಂಧಿತ ಶಂಕಿತ ಉಗ್ರನನ್ನು ರಿಸ್ವಾನ್ ಇಬ್ರಾಹಿಂ ಮೋಮಿನ್ ಎಂದು ಗುರುತಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಯ) ಕಾಯ್ದೆಯಡಿಯಲ್ಲಿ ಆತನನ್ನು ಬಂಧನ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೆ ಒಳಗಾಗಿರುವ ಆರು ಆರೋಪಿಗಳೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಶನಿವಾರ ಜಾಕೀರ್ ಹುಸೈನ್ ಶೇಕ್ ಎಂಬ ಆರೋಪಿಯನ್ನು ಬಂಧನ ಮಾಡಲಾಗಿದೆ. ದೆಹಲಿ ವಿಶೇಷ ಪೊಲೀಸ್ ವಿಭಾಗ ಈ ಜಾಕೀರ್ ಹುಸೈನ್ ಶೇಕ್ನ ವಿಚಾರಣೆಯನ್ನು ನಡೆಸಿದ ಸಂದರ್ಭದಲ್ಲಿ ರಿಸ್ವಾನ್ ಇಬ್ರಾಹಿಂ ಮೋಮಿನ್ ಹೆಸರು ಹೊರಬಿದ್ದಿದ್ದು ಈ ಹಿನ್ನೆಲೆ ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ.
"ಜಾಕೀರ್ ಹುಸೈನ್ ಶೇಕ್ ಅನ್ನು ಬಂಧನ ಮಾಡಲಾದ ಬೆನ್ನಲ್ಲೇ ಜಾಕೀರ್ ಹುಸೈನ್ ಶೇಕ್ನೊಂದಿಗೆ ಸಂಪರ್ಕದಲ್ಲಿ ಇದ್ದ ಮೊಬೈಲ್ ಫೋನ್ ಅನ್ನು ಮುಂಬ್ರಾ ನಿವಾಸಿ ರಿಸ್ವಾನ್ ಇಬ್ರಾಹಿಂ ಮೋಮಿನ್ ನಾಶ ಮಾಡಿದ್ದಾನೆ," ಎಂದು ಮಹಾರಾಷ್ಟ್ರ ಭಯೋತ್ಪಾದನಾ ವಿರೋಧಿ ದಳವು (ಎಟಿಎಸ್) ಆರೋಪ ಮಾಡಿದೆ. ಆದರೂ ಬಳಿಕ ರಿಸ್ವಾನ್ ಇಬ್ರಾಹಿಂ ಮೋಮಿನ್ ಈ ಭಯೋತ್ಪಾದನಾ ದಾಳಿ ಸಂಚು ಪ್ರಕರಣದಲ್ಲಿ ನಂಟನ್ನು ಹೊಂದಿರುವ ಬಗ್ಗೆ ಮಾಹಿತಿ ಪಡೆದು, ರಿಸ್ವಾನ್ ಇಬ್ರಾಹಿಂ ಮೋಮಿನ್ ಅನ್ನು ಆತನ ನಿವಾಸದಲ್ಲೇ ವಶಕ್ಕೆ ಪಡೆದಿದೆ. ಬಳಿಕ ವಿಚಾರಣೆ ನಡೆಸಿ ಬಂಧನ ಮಾಡಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments