Select Your Language

Notifications

webdunia
webdunia
webdunia
webdunia

ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ

ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ
Luknow , ಗುರುವಾರ, 30 ಮಾರ್ಚ್ 2017 (09:21 IST)
ಲಕ್ನೋ: ದೆಹಲಿಯಿಂದ ಬರುತ್ತಿದ್ದ ಜಬಾಲ್ ಪುರ್-ಮಹಾಕೌಶಲ್ ಎಕ್ಸ್ ಪ್ರೆಸ್ ರೈಲು ಉತ್ತರ ಪ್ರದೇಶದ ಮಹೋಬಾ ರೈಲು ನಿಲ್ದಾಣದ ಬಳಿ ಗುರುವಾರ ಬೆಳಿಗ್ಗೆ ಹಳಿ ತಪ್ಪಿದ್ದು, ಹಲವರಿಗೆ ಗಾಯಗಳಾದ ವರದಿಗಳಾಗಿವೆ.

 

ಘಟನೆಯಲ್ಲಿ 22 ಮಂದಿಗೆ ಗಾಯಗೊಂಡಿದ್ದಾರೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರ್ಘಟನೆ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಗಳ ನೇತೃತ್ವ ವಹಿಸಲು ರಾಜ್ಯ ಆರೋಗ್ಯ ಸಚಿವರ ಸಿದ್ಧಾರ್ಥ್ ನಾಥ್ ಸಿಂಗ್ ರನ್ನು ಸಿಎಂ ಯೋಗಿ ಆದಿತ್ಯನಾಥ್ ಕಳುಹಿಸಿಕೊಟ್ಟಿದ್ದಾರೆ.

 
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

3000 ಪೋರ್ನ್ ವೆಬ್ ಸೈಟ್`ಗಳನ್ನ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ