Webdunia - Bharat's app for daily news and videos

Install App

ಏರ್‍ಇಂಡಿಯಾ ಒಪ್ಪಂದ ಯಾರ ಪಾಲಾಯ್ತು ಗೊತ್ತೇ?

Webdunia
ಮಂಗಳವಾರ, 26 ಅಕ್ಟೋಬರ್ 2021 (09:15 IST)
ನವದೆಹಲಿ : ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಮಾರಾಟ ಮಾಡಲು ಟಾಟಾ ಸನ್ಸ್‌ನೊಂದಿಗೆ ಷೇರು ಖರೀದಿ ಒಪ್ಪಂದಕ್ಕೆ ಸರ್ಕಾರ ಸೋಮವಾರ ಸಹಿ ಹಾಕಿದೆ.
ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ಟ್ವೀಟ್‌ನಲ್ಲಿ, ಏರ್ ಇಂಡಿಯಾದ ಕಾರ್ಯತಂತ್ರ ಹೂಡಿಕೆ ಹಿಂತೆಗೆತಕ್ಕಾಗಿ ಟಾಟಾ ಸನ್ಸ್‌ನೊಂದಿಗೆ ಷೇರು ಖರೀದಿ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಿದೆ ಎಂದು ಹೇಳಿದ್ದಾರೆ. ಅವರ ಟ್ವೀಟ್ ಹೀಗಿದೆ: “ಏರ್ ಇಂಡಿಯಾದ ಕಾರ್ಯತಂತ್ರದ ಹೂಡಿಕೆ ಹಿಂತೆಗೆತಕ್ಕಾಗಿ ಟಾಟಾ ಸನ್ಸ್‌ನೊಂದಿಗೆ ಸರ್ಕಾರವು ಇಂದು ಷೇರು ಖರೀದಿ ಒಪ್ಪಂದಕ್ಕೆ ಸಹಿ ಮಾಡಿದೆ.” ಈ ಒಪ್ಪಂದವು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಗ್ರೌಂಡ್ ಹ್ಯಾಂಡ್ಲಿಂಗ್ ಆರ್ಮ್ ಂISಂಖಿS ಮಾರಾಟವನ್ನು ಒಳಗೊಂಡಿದೆ. ಸ್ಪೈಸ್‌ಜೆಟ್ ಪ್ರವರ್ತಕ ಅಜಯ್ ಸಿಂಗ್ ನೇತೃತ್ವದ ಒಕ್ಕೂಟ ರೂ. 15,100 ಕೋಟಿಗೆ ಮಾಡಿದ್ದ ಆಫರ್ ಅನ್ನು ಟಾಟಾ ಸೋಲಿಸಿತು. ಅಂದಹಾಗೆ ನಷ್ಟವನ್ನು ಉಂಟುಮಾಡುತ್ತಿದ್ದ ಏರ್ಇಂಡಿಯಾದಿಂದ ತನ್ನ ಶೇ 100ರಷ್ಟು ಪಾಲನ್ನು ಮಾರಾಟ ಮಾಡಲು ಸರ್ಕಾರವು ನಿಗದಿಪಡಿಸಿದ ಮೀಸಲು ಬೆಲೆ ರೂ. 12,906 ಕೋಟಿ ಆಗಿತ್ತು.
ಟಾಟಾ ಕಂಪೆನಿ ಹಿಡಿತದಲ್ಲಿ ಇರುವ ಮೂರನೇ ಏರ್‌ಲೈನ್ ಬ್ರ್ಯಾಂಡ್ ಏರ್ ಇಂಡಿಯಾ ಆಗಲಿದೆ. ಇದು ಈಗಾಗಲೇ ಏರ್ ಏಷ್ಯಾ ಇಂಡಿಯಾ ಮತ್ತು ವಿಸ್ತಾರದಲ್ಲಿ ಹೆಚ್ಚಿನ ಪಾಲನ್ನು ಹೊಂದಿದೆ. ಅಂದಹಾಗೆ ವಿಸ್ತಾರವು ಸಿಂಗಾಪುರ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ಸೇರಿ ನಡೆಸುತ್ತಿರುವ ಜಂಟಿ ಉದ್ಯಮವಾಗಿದೆ. 2003-04ರ ನಂತರ ಇದು ಮೊದಲ ಖಾಸಗೀಕರಣವಾಗಿದೆ. ಸರ್ಕಾರವು ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ನೀಡಿದ್ದ ಪ್ರಸ್ತಾಪವನ್ನು ಸ್ವೀಕರಿಸಿತು. ಇದು ಉಪ್ಪಿನಿಂದ-ಸಾಫ್ಟ್‌ವೇರ್ ಕಂಪೆನಿಯ ತನಕ ಉದ್ಯಮ ನಡೆಸುತ್ತದೆ. ಈ ತಿಂಗಳ ಆರಂಭದಲ್ಲಿ ತಿಳಿಸಿರುವಂತೆ, ರೂ. 2,700 ಕೋಟಿ ನಗದು ಪಾವತಿ ಮತ್ತು ಏರ್‌ಲೈನ್ನ ಸಾಲದ ರೂ. 15,300 ಕೋಟಿಗಳನ್ನು ಟಾಟಾ ಸನ್ಸ್ ತೆಗೆದುಕೊಳ್ಳಲಿದೆ.
ಲೆಟರ್ ಆಫ್ ಇಂಟೆಂಟ್ - ಅಂದರೆ ಮಾರಾಟ ಉದ್ದೇಶ ಪತ್ರವನ್ನು (ಲೋಐ) ಟಾಟಾ ಸಮೂಹಕ್ಕೆ ನೀಡಲಾಗಿದ್ದು, ಸರ್ಕಾರವು ತನ್ನ ಶೇಕಡಾ 100ರಷ್ಟು ಪಾಲನ್ನು ಮಾರಾಟ ಮಾಡುವ ಇಚ್ಛೆಯನ್ನು ದೃಢಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments