ಕಾಶ್ಮೀರ ವಿವಾದ ಬಗೆಹರಿಸಲು ಅಮೆರಿಕಾ, ಚೀನಾ ಮಧ್ಯಸ್ಥಿಕೆಗೆ ಮನವಿ ಮಾಡಬೇಕು: ಫಾರೂಕ್ ಅಬ್ದುಲ್ಲಾ

Webdunia
ಶುಕ್ರವಾರ, 21 ಜುಲೈ 2017 (18:37 IST)
ಶ್ರೀನಗರ:ಕಾಶ್ಮೀರ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಹಾಗೂ ಚೀನಾದಂತಹ ದೇಶಗಳನ್ನು ಭಾರತ ಮಧ್ಯಸ್ಥಿಕೆಗಾಗಿ ಬಳಸಿಕೊಳ್ಳಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. 
 
ಸಿಕ್ಕಿಂ ನ ಡೋಕ್‌ಲಾಂ ಗಡಿಯಲ್ಲಿ  ಭಾರತ - ಚೀನ ಇದೀಗ ಎರಡು ತಿಂಗಳಿಂದ ಮುಖಾಮುಖೀಯಾಗಿದ್ದು ಗಂಭೀರ ಉದ್ವಿಗ್ನತೆಗೆ ಹಾಗೂ ಸಂಭಾವ್ಯ ಸಮರಕ್ಕೆ ಕಾರಣವಾಗಿರುವ ಈ ಗಡಿ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಚೀನದೊಂದಿಗೆ ಮಾತುಕತೆ ನಡೆಸಲು ಸಿದ್ಧವಾಗಿದೆ; ಹಾಗಿರುವಾಗ ಬಹು ದೀರ್ಘ‌ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸಲು ಭಾರತ ಪಾಕ್‌ ಜತೆಗೆ ಯಾಕೆ ಮಾತುಕತೆಗೆ ಮುಂದಾಗಬಾರದು; ಅಥವಾ ಮೂರನೇ ದೇಶದ ಮಧ್ಯಸ್ಥಿಕೆಗಾಗಿ ಭಾರತ ಯಾಕೆ ಚೀನ ಅಥವಾ ಅಮೆರಿಕವನ್ನು ಬಳಸಿಕೊಳ್ಳಬಾರದು ಎಂದು ಪ್ರಶ್ನಿಸಿದ್ದಾರೆ.
 
ಕಾಶ್ಮೀರ ಸಮಸ್ಯೆ ಬಗೆಹರಿಸಲು ಎನ್ನೆಷ್ಟು ಕಾಲ ಕಾಯಬೇಕು? ಕೆಲವೊಮ್ಮೆ ಕೊಂಬುಗಳನ್ನು ಹಿಡಿದೇ ಗೂಳಿಗಳನ್ನು ಎಳೆಯಬೇಕಾಗುತ್ತದೆ. ವಿಶ್ವದ ಹಲವು ರಾಷ್ಟ್ರಗಳೊಂದಿಗೆ ಭಾರತ ಮಿತ್ರತ್ವವನ್ನು ಹೊಂದಿದೆ. ಅಂತಹ ರಾಷ್ಟ್ರಗಳೊಂದಿಗೆ ಮಾತುಕತೆ ನಡೆಸಿ ಕಾಶ್ಮೀರ ವಿವಾದ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಭಾರತ ಮನವಿ ಮಾಡಬಹುದು. ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಕಾಶ್ಮೀರ ಸಮಸ್ಯೆ ಬಗೆಹರಿಯಬೇಕೆಂದು ಹೇಳಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಚೀನಾ ಕೂಡ ಸಿದ್ಧವಿದ್ದೇವೆಂದು ಹೇಳಿದೆ ಎಂದು ಹೇಳಿದ್ದಾರೆ. ಫಾರೂಕ್ ಅವರ ಈ ಹೇಳಿಕೆ ರಾಜಕೀಯ ವಲಯಗಳಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments