Webdunia - Bharat's app for daily news and videos

Install App

ಅಮಿತ್ ಶಾಗೆ ಟಾಂಗ್ ಕೊಡಲು ಹೊಸ ಯೋಜನೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

Krishnaveni K
ಶನಿವಾರ, 21 ಡಿಸೆಂಬರ್ 2024 (15:09 IST)
ನವದೆಹಲಿ: ಇತ್ತೀಚೆಗೆ ಗೃಹಸಚಿವ ಅಮಿತ್ ಶಾ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದ್ದಾರೆ.

ದೆಹಲಿ ಚುನಾವಣೆ ಪ್ರಚಾರ ವೇಳೆ ಅರವಿಂದ್ ಕೇಜ್ರಿವಾಲ್ ಅಂಬೇಡ್ಕರ್ ಹೆಸರಿನ ಸ್ಕಾಲರ್ ಶಿಪ್ ಯೋಜನೆ ಘೋಷಿಸಿದ್ದು ಅಮಿತ್ ಶಾಗೆ ಟಾಂಗ್ ಕೊಟ್ಟಿದ್ದಾರೆ. ಅಮಿತ್ ಶಾ ಪ್ರಸ್ತಾಪಿಸಿದ್ದ ‘ಅಗೌರವ’ ಹೇಳಿಕೆಗೆ ತದ್ವಿರುದ್ಧವಾಗಿ ‘ಅಂಬೇಡ್ಕರ್ ಸಮ್ಮಾನ್’ ಎಂಬ ಸ್ಕಾಲರ್ ಶಿಪ್ ಯೋಜನೆ ಘೋಷಿಸಿದ್ದಾರೆ.

ಈ ಯೋಜನೆಯ ಅನ್ವಯ ವಿದೇಶೀ ವಿದ್ಯಾಲಯಗಳಿಗೆ ಪ್ರವೇಶ ಪಡೆಯುವ ದಲಿತ ವಿದ್ಯಾರ್ಥಿಗಳಿಗೆ ದೆಹಲಿಯ ಆಮ್ ಆದ್ಮಿ ಸರ್ಕಾರ ಸ್ಕಾಲರ್ ಶಿಪ್ ಯೋಜನೆಯಡಿ ಆರ್ಥಿಕ ಸಹಾಯ ಒದಗಿಸಲಿದೆ. ಹಣದ ಕೊರತೆಯಿಂದ ದಲಿತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಬಾರದು ಎಂಬ ಏಕೈಕ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅಂಬೇಡ್ಕರ್ ಅವರನ್ನು ಅಮಿತ್ ಶಾ ಅಪಹಾಸ್ಯ ಮಾಡಿದ್ದು ನೋಡಿ ನನಗೆ ನೋವಾಯಿತು. ಸಂಸತ್ತಿನಲ್ಲಿ ಅಂಬೇಡ್ಕರ್ ಅವರನ್ನು ಅವಮಾನ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಹೇಳಿಕೆಗೆ ಪ್ರತಿಯಾಗಿ ನಾನು ಇಂದು ಅಂಬೇಡ್ಕರ್ ಸಮ್ಮಾನ್ ಯೋಜನೆ ಘೋಷಿಸುತ್ತಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments