Webdunia - Bharat's app for daily news and videos

Install App

ಕಾರು ಕಸಿದುಕೊಂಡು ಪರಾರಿಯಾದ ಸಶಸ್ತ್ರಧಾರಿಗಳು: ಉಗ್ರರ ದಾಳಿಯ ಬೀತಿ?

Webdunia
ಶನಿವಾರ, 30 ಜನವರಿ 2016 (19:41 IST)
25 ವರ್ಷದ ವ್ಯಕ್ತಿಯೊಬ್ಬನಿಗೆ ನಾಲ್ವರು ಶಸ್ತ್ರಧಾರಿ ಆರೋಪಿಗಳು ರಿವಾಲ್ವರ್‌ನಿಂದ ಬೆದರಿಸಿ ಆತನ ಕಾರು ಕಸಿದುಕೊಂಡು ಪರಾರಿಯಾದ ಘಟನೆ ವರದಿಯಾಗಿದೆ. ಪೊಲೀಸರು ಕಾರು ಕಸಿದುಕೊಂಡು ಹೋದ ವ್ಯಕ್ತಿಗಳು ಉಗ್ರರಿರಬಹುದು ಎಂದು ಶಂಕಿಸಿದ ಪೊಲೀಸರು ಹೈ ಅಲರ್ಟ್ ಜಾರಿಗೊಳಿಸಿದ್ದಾರೆ.
 
ದಶಮೇಶ್ ನಗರ್ ಬಡಾವಣೆಯ ನಿವಾಸಿಯಾದ ವರುಣ್ ಜೈನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಇಂದು ಬೆಳಿಗ್ಗೆ 5 ಗಂಟೆಗೆ ಗುರುದ್ವಾರಕ್ಕಾಗಿ ತೆರಳುತ್ತಿರುವ ಸಂದರ್ಭದಲ್ಲಿ ಮುಸುಕುಧಾರಿಗಳಾದ ನಾಲ್ಕು ಮಂದಿ ಆರೋಪಿಗಳು ಮನೆಯ ಮುಂದೆ ತಡೆದು ರಿವಾಲ್ವರ್‌ನಿಂದ ಬೆದರಿಸಿ ಕಾರು ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.  
 
ನಾನು ಅವರನ್ನು ತಡೆಯಹೋದಾಗ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
 
ನಾಲ್ವರು ಆರೋಪಿಗಳು ಶ್ರೀಹಿಂದ್ ರಸ್ತೆಯವರೆಗೆ ನನ್ನನ್ನು ಕಾರಿನಲ್ಲಿಯೇ ಕರೆದುಕೊಂಡು ಹೋಗಿ, ನಂತರ ಅಲ್ಲಿ ನನ್ನನ್ನು ಇಳಿಸಿ ಪರಾರಿಯಾಗಿದ್ದಾರೆ. ಅವರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿಸಿದ್ದಾರೆ.
 
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಎಚ್ಚರಗೊಂಡ ಪೊಲೀಸ್ ಇಲಾಖೆ, ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಆರಂಭಿಸಿದೆ. ಅಪರಿಚಿತ ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ತಿಂಗಳು ಪಠಾನ್‌ಕೋಟ್ ವಾಯುನೆಲೆಯ ಮೇಲೆ ಉಗ್ರರ ದಾಳಿ ನಡೆದ ನಂತರ ಪಂಜಾಬ್ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments