Select Your Language

Notifications

webdunia
webdunia
webdunia
webdunia

ಬಂಧನ ಭೀತಿಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್

ಬಂಧನ ಭೀತಿಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್
NewDelhi , ಗುರುವಾರ, 15 ಜೂನ್ 2017 (10:17 IST)
ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

 
ಉತ್ತರ ಪ್ರದೇಶದ ರೋಹ್ಟಗ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 2016 ರಲ್ಲಿ ಸದ್ಭಾವನಾ ಸಮ್ಮೇಳನದಲ್ಲಿ ಶಾಂತಿ ಕದಡುವಂತಹ ಹೇಳಿಕೆ ನೀಡಿದ್ದ ಬಾಬಾ ರಾಮ್ ದೇವ್ ವಿರುದ್ಧ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗಿತ್ತು.

ಆದರೆ ಇದರ ವಿಚಾರಣೆಗೆ ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ರಾಮ್ ದೇವ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಭಾರತ ಮಾತಾ ಕಿ ಜೈ ಎನ್ನದವರ ತಲೆ ಕಡಿಯಬೇಕು ಎಂದು ರಾಮ್ ದೇವ್ ಅಂದು ಸಾರ್ವಜನಿಕವಾಗಿ ಕರೆ ಕೊಟ್ಟಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಈ ಪ್ರಕರಣ ಸಂಬಂಧ ರಾಮ್ ದೇವ್ ಗೆ ಬಂಧನ ವಾರಂಟ್ ಆದೇಶಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಬಾಬಾ ನ್ಯಾಯಾಲಯಕ್ಕೆ ಹಾಜರಾಗಲೇ ಬೇಕಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸುಷ್ಮಾ ಸ್ವರಾಜ್ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ?!