ಬಂಧನ ಭೀತಿಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್

Webdunia
ಗುರುವಾರ, 15 ಜೂನ್ 2017 (10:17 IST)
ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

 
ಉತ್ತರ ಪ್ರದೇಶದ ರೋಹ್ಟಗ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 2016 ರಲ್ಲಿ ಸದ್ಭಾವನಾ ಸಮ್ಮೇಳನದಲ್ಲಿ ಶಾಂತಿ ಕದಡುವಂತಹ ಹೇಳಿಕೆ ನೀಡಿದ್ದ ಬಾಬಾ ರಾಮ್ ದೇವ್ ವಿರುದ್ಧ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗಿತ್ತು.

ಆದರೆ ಇದರ ವಿಚಾರಣೆಗೆ ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ರಾಮ್ ದೇವ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಭಾರತ ಮಾತಾ ಕಿ ಜೈ ಎನ್ನದವರ ತಲೆ ಕಡಿಯಬೇಕು ಎಂದು ರಾಮ್ ದೇವ್ ಅಂದು ಸಾರ್ವಜನಿಕವಾಗಿ ಕರೆ ಕೊಟ್ಟಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಈ ಪ್ರಕರಣ ಸಂಬಂಧ ರಾಮ್ ದೇವ್ ಗೆ ಬಂಧನ ವಾರಂಟ್ ಆದೇಶಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ಬಾಬಾ ನ್ಯಾಯಾಲಯಕ್ಕೆ ಹಾಜರಾಗಲೇ ಬೇಕಿದೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments