Webdunia - Bharat's app for daily news and videos

Install App

ಹಾರ್ದಿಕ್ ಪಟೇಲ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

Webdunia
ಬುಧವಾರ, 25 ಅಕ್ಟೋಬರ್ 2017 (18:33 IST)
ನ್ಯಾಯಾಲಯದ ವಿಚಾರಣೆಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಪಟೇಲ್ ಮೀಸಲಾತಿ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಮತ್ತು ಲಾಲ್‌ಜಿ ಪಟೇಲ್‌ ಅವರಿಗೆ ಕೋರ್ಟ್, ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಮೂರು ವಿಚಾರಣೆಗಳಿಗೆ ಹಾಜರಾಗದ ಕಾರಣಕ್ಕಾಗಿ ವಾರಂಟ್ ನೀಡಲಾಗಿದೆ. ಜುಲೈ 2015 ರಲ್ಲಿ ಮೀಸಲಾತಿ ನೀಡುವಂತೆ  ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಹಾರ್ದಿಕ್ ಪಟೇಲ್ ನೇತೃತ್ವದ ಗುಂಪು, ಬಿಜೆಪಿ ಶಾಸಕ ಋುಷಿಕೇಶ್ ಪಟೇಲ್ ಅವರ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಶಾಸಕ ಋುಷಿಕೇಶ್ ಪೊಲೀಸ್ ಠಾಣೆಯಲ್ಲಿ ಹಾರ್ದಿಕ್ ಸೇರಿದಂತೆ 17 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರು. 
 
ನಾನು ನಿಯಮಿತವಾಗಿ ವಿಚಾರಣೆಗೆ ಹಾಜರಾಗಿರುವೆ. ಕೆಲವು ಸಾಮಾಜಿಕ ಬದ್ಧತೆಯ ಕಾರಣದಿಂದ ನಾನು ಇಂದು ವಿಚಾರಣೆಗೆ ಹಾಜರಾಗಿರಲಿಲ್ಲ. ಒಂದು ವಿಚಾರಣೆಗೆ ಗೈರಾದಲ್ಲಿ ಬಂಧನ ವಾರೆಂಟ್ ಹೊರಡಿಸುವುದನ್ನು ಯಾರು ಕೇಳಿರಲಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಹಾರ್ದಿಕ್ ಪಟೇಲ್‌ಗೆ ಆತ್ಮಿಯರಾಗಿರುವ ದೈನೇಶ್ ಭಂಬಾನಿಯಾ ಮಾತನಾಡಿ, ಹಾರ್ದಿಕ್ ಒಮ್ಮೆ ಮಾತ್ರ ವಿಚಾರಣೆಗೆ ಹಾಜರಾಗಿಲ್ಲ ಎಂದು ತಿಳಿಸಿದ್ದಾರೆ.
 
ಗುಜರಾತ್ ರಾಜ್ಯದಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋಲಲಿದೆ ಎನ್ನುವುದು ಹಾರ್ದಿಕ್ ಪಟೇಲ್ ಬಂಧನ ವಾರೆಂಟ್‌ನಿಂದ ಖಟಿತವಾಗಿದೆ ಎಂದು ಪಟಿದಾರ್ ಅನಾಮತ್ ಅಂದೋಲನ್ ಸಮಿತಿ ಮುಖಂಡ ಅತುಲ್ ಪಟೇಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments