Webdunia - Bharat's app for daily news and videos

Install App

ರಾಜಕೀಯ ನಾಯಕರ ಮಿಮಿಕ್ರಿ ಮಾಡಿ ಅರೆಸ್ಟ್ ಆದ ವ್ಯಾಪಾರಿ

Webdunia
ಭಾನುವಾರ, 2 ಜೂನ್ 2019 (11:32 IST)
ಗಾಂಧಿನಗರ : ರಾಜಕೀಯ ನಾಯಕರ ಮಾತಿನಂತೆ  ಮಿಮಿಕ್ರಿ  ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ರೈಲ್ವೇ ಭದ್ರತಾ ಸಿಬ್ಬಂದಿ (ಆರ್ ಪಿಎಫ್) ಅರೆಸ್ಟ್ ಮಾಡಿದ್ದಾರೆ.




ಅದ್ವೇಶ್ ದುಬೆ ಬಂಧಿತ ವ್ಯಾಪಾರಿ. ಈತ ಗೊಂಬೆ, ಆಟಿಕೆ ವಸ್ತುಗಳನ್ನು  ಹಾಗೂ ವೆನಿಟಿ ಬ್ಯಾಗ್ಗಳನ್ನು ರೈಲಿನಲ್ಲಿ ವ್ಯಾಪಾರ ಮಾಡುತ್ತಿದ್ದ. ಈತ ಗ್ರಾಹಕರನ್ನು ತನ್ನತ್ತ ಸೆಳೆಯಲು ಪ್ರಧಾನಿ ಮೋದಿ, ಕಾಂಗ್ರೆಸ್ ಸಂಸದೀಯ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ನಾಯಕರ ಮಿಮಿಕ್ರಿ ಮಾಡುತ್ತಿದ್ದ.


ಪ್ರಯಾಣಿಕರೊಬ್ಬರು ಅದ್ವೇಶ್ ದುಬೆ ಮಿಮಿಕ್ರಿ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು  ಈಗ ವೈರಲ್ ಆಗಿದ್ದು, ರೈಲ್ವೇ ಪೊಲೀಸರ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಆತನನ್ನು ಗುಜರಾತ್‍ನ ಸೂರತ್ ರೈಲು ನಿಲ್ದಾಣದಲ್ಲಿ ಆರ್ ಪಿಎಫ್ ಪೊಲೀಸರು ಬಂಧಿಸಿದ್ದಾರೆ.


ಅದ್ವೇಶ್ ದುಬೆ ವಿರುದ್ಧ ರೈಲ್ವೇ ಕಾಯ್ದೆ ಸೆಕ್ಷನ್ 44 (ಭಿಕ್ಷಾಟನೆ ನಿಷೇಧ), 145 ಬಿ (ಪ್ರಯಾಣಿಕರಿಗೆ ಕಿರುಕುಳ ಅಥವಾ ನಿಷೇಧಿತ ಭಾಷೆ ಬಳಕೆ) ಹಾಗೂ 147 (ಪರವಾನಿಗೆ ರಹಿತ ವ್ಯಾಪಾರ)ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ 10 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments