Webdunia - Bharat's app for daily news and videos

Install App

ರಾಹುಲ್ ಗಾಂಧಿಗೆ ಅದ್ಯಾವಾಗ ಬುದ್ದಿ ಬರುತ್ತೋ..!: ಸಚಿವ ಅರುಣ್ ಜೇಟ್ಲಿ

Webdunia
ಗುರುವಾರ, 7 ಜೂನ್ 2018 (09:54 IST)
ನವದೆಹಲಿ: ಪ್ರತೀ ಬಾರಿ ರಾಹುಲ್ ಗಾಂಧಿ ಸಂಸತ್ತಿನ ಹೊರಗೆ ಮತ್ತು ಒಳಗೆ ಮಾತನಾಡುವುದನ್ನು ಕೇಳಿದಾಗಲೆಲ್ಲಾ ನನಗನಿಸುವುದು ಈ ಮನುಷ್ಯನಿಗೆ ಅದೇನು ತಿಳುವಳಿಕೆ ಇದೆ? ಅದ್ಯಾವಾಗ ಬುದ್ಧಿ ಬರುತ್ತದೋ ಎಂದು.. ಹೀಗಂತ ವಿದೇಶಾಂಗಗ ಸಚಿವ ಅರುಣ್ ಜೇಟ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಉದ್ದಿಮೆದಾರರ ಸಾಲಮನ್ನಾ ಮಾಡುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಜೇಟ್ಲಿ ತಿರುಗೇಟು ಕೊಟ್ಟಿದ್ದಾರೆ.

‘ರಾಹುಲ್ ಗಾಂಧಿ ಹೇಳುತ್ತಿರುವುದೆಲ್ಲವೂ ಸುಳ್ಳು. ಇದು ನಮ್ಮ ಕಾಲದಲ್ಲಲ್ಲ. ಯುಪಿಎ ಎರಡನೇ ಅವಧಿಯಲ್ಲಿ ಇಂತಹ ಎಡವಟ್ಟು ನಡೆಯುತ್ತಿತ್ತು. ರೈತರಿಗೆ ವಂಚಿಸಿ ಉದ್ಯಮಿಗಳ ಬೇಕಾಬಿಟ್ಟೆ ಹಣ ಒದಗಿಸಲಾಗುತ್ತಿತ್ತು. ನಾವು ಅದನ್ನೆಲ್ಲಾ ಹಂತ ಹಂತವಾಗಿ ನಿಲ್ಲಿಸಿದ್ದೇವೆ. ಇದೀಗ ಅದರ ವಸೂಲಾತಿ ಕೆಲಸ ಮಾಡುತ್ತಿದ್ದೇವೆ’ ಎಂದು ಜೇಟ್ಲಿ ಹೇಳಿದ್ದಾರೆ.

ಇನ್ನು ಇದೇ ರ್ಯಾಲಿಯಲ್ಲಿ ಚೀನಾದಲ್ಲಿ ತಯಾರಾಗುತ್ತಿರುವ ಮೊಬೈಲ್ ಗಳನ್ನು ನಾವು ಅಧಿಕಾರಕ್ಕೆ ಬಂದರೆ ಭಾರತದಲ್ಲೇ ತಯಾರಿಸುತ್ತೇವೆ ಎಂದಿದ್ದ ರಾಹುಲ್ ಮಾತನ್ನು ಲೇವಡಿ ಮಾಡಿರುವ ಜೇಟ್ಲಿ ಇದು ಅಜ್ಞಾನದ ಪರಮಾವಧಿ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments