Webdunia - Bharat's app for daily news and videos

Install App

ಮೋದಿಗೆ ವಯಸ್ಸಾಯ್ತು, ಮುಂದಿನ ವರ್ಷ ನಿವೃತ್ತಿಯಾಗುತ್ತಾರಾ? ಅರವಿಂದ್ ಕೇಜ್ರಿವಾಲ್ ಟಾಂಗ್

Krishnaveni K
ಶನಿವಾರ, 11 ಮೇ 2024 (15:01 IST)
ನವದೆಹಲಿ: ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೊದಲ ಪತ್ರಿಕಾಗೋಷ್ಠಿಯಲ್ಲೇ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಮೊನ್ನೆಯಷ್ಟೇ ಕೇಜ್ರಿವಾಲ್ ಗೆ ಜೂನ್ 2 ರವರೆಗೆ ಮಧ‍್ಯಂತರ ಜಾಮೀನು ನೀಡಿ ಕೋರ್ಟ್ ಬಿಡುಗಡೆ ಮಾಡಿತ್ತು. ಚುನಾವಣೆ ದೃಷ್ಟಿಯಿಂದ ಸದ್ಯಕ್ಕೆ ಅವರನ್ನು ಬಿಡುಗಡೆ ಮಾಡಲಾಗಿದೆ. ಜೂನ್ 2 ರ ನಂತರ ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಷರತ್ತು ವಿಧಿಸಲಾಗಿದೆ.

ಈ ನಡುವೆ ಜೈಲಿನಿಂದ ಹೊರಬಂದ ಬೆನ್ನಲ್ಲೇ ಪತ್ನಿ ಜೊತೆ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ ಕೇಜ್ರಿವಾಲ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ನಮ್ಮ ಎಎಪಿ ಪಕ್ಷವನ್ನು ತುಳಿಯಲು ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

‘ಮೋದಿಗೆ ಈ ವರ್ಷ ಸೆಪ್ಟೆಂಬರ್ ಗೆ 75 ವರ್ಷವಾಗುತ್ತದೆ. ತಮ್ಮ ಪಕ್ಷದಲ್ಲಿ 75 ವರ್ಷ ಮೀರಿದವರು ಅಧಿಕಾರದಲ್ಲಿರಬಾರದು ಎಂದು ಅವರೇ ನಿಯಮ ಮಾಡಿಕೊಂಡಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಎಲ್ಲರೂ ನಿವೃತ್ತರಾಗಿದ್ದಾರೆ. ಹಾಗಿದ್ದರೆ ಮೋದಿ ಕೂಡಾ ನಿವೃತ್ತಿಯಾಗಬೇಕು’ ಎಂದಿದ್ದಾರೆ.

‘ಒಂದು ವೇಳೆ ಮೋದಿ ತಾವು ಮಾಡಿದ ನಿಯಮವನ್ನು ಪಾಲಿಸಿ ನಿವೃತ್ತಿಯಾಗುತ್ತಾರೆಂದರೆ ಮೋದಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಹಾಗಿದ್ದರೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಯಾರು? ಹಾಗಿದ್ದಲ್ಲಿ ಮೋದಿ ಉತ್ತರಾಧಿಕಾರಿಯಾಗಿ ಯೋಗಿ ಆದಿತ್ಯನಾಥ್ ಅಥವಾ ಅಮಿತ್ ಶಾ ಬರಬಹುದು. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಗ್ಯಾರಂಟಿಯನ್ನು ಯೋಗಿ, ಅಮಿತ್ ಶಾ ಪೂರ್ಣಗೊಳಿಸಬಹುದೇ?’ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments