Webdunia - Bharat's app for daily news and videos

Install App

ದೆಹಲಿ ಸೋತ ಅರವಿಂದ್ ಕೇಜ್ರಿವಾಲ್ ಗೆ ಪಂಜಾಬ್ ಟೆನ್ಷನ್: ಇಂದು ಅರ್ಜೆಂಟ್ ಮೀಟಿಂಗ್

Krishnaveni K
ಮಂಗಳವಾರ, 11 ಫೆಬ್ರವರಿ 2025 (09:05 IST)
ನವದೆಹಲಿ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಸೋತು ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಗೆ ಪಂಜಾಬ್ ಟೆನ್ಷನ್ ಶುರುವಾಗಿದೆ. ಇಂದು ಅವರು ಪಂಜಾಬ್ ಶಾಸಕರ ಸಭೆ ಕರೆದಿದ್ದಾರೆ.

ಅಬಕಾರಿ ಅಕ್ರಮ ಹಗರಣದಲ್ಲಿ ಬಂಧಿತರಾಗಿ ಬೇಲ್ ಮೇಲೆ ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅರವಿಂದ್ ಕೇಜ್ರಿವಾಲ್ ಈ ಬಾರಿ ದೆಹಲಿ ಚುನಾವಣೆ ಗೆದ್ದು ಮತ್ತೆ ಮುಖ್ಯಮಂತ್ರಿ ಪಟ್ಟಕ್ಕೇರುವ ವಿಶ್ವಾಸದಲ್ಲಿದ್ದರು. ಆದರೆ ಕೇಜ್ರಿವಾಲ್ ಅಂದುಕೊಂಡಿದ್ದು ನಡೆದಿಲ್ಲ.

ಇದರ ನಡುವೆ ಎಎಪಿ ಅಧಿಕಾರದಲ್ಲಿರುವ ಪಂಜಾಬ್ ನಲ್ಲಿ ಟೆನ್ಷನ್ ಶುರುವಾಗಿದೆ. ದೆಹಲಿಯಲ್ಲಿ ಎಎಪಿ ಸೋಲುತ್ತಿದ್ದಂತೇ ಇತ್ತ ಪಂಜಾಬ್ ಆಪ್ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಶಾಸಕರು ಈಗಾಗಲೇ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಬಂದಿದೆ.

ದೆಹಲಿಯಂತೂ ಹೋಯ್ತು, ಈಗಿರುವ ಪಂಜಾಬ್ ಉಳಿಸಿಕೊಳ್ಳುವ ಒತ್ತಡ ಕೇಜ್ರಿವಾಲ್ ರದ್ದು. ಅದಕ್ಕಾಗಿ ಅವರು ಇಂದು ಪಂಜಾಬ್ ಶಾಸಕರ ಜೊತೆ ಸಭೆ ಕರೆದಿದ್ದು, ಸರ್ಕಾರ ಉಳಿಸಿಕೊಳ್ಳುವ ಕಸರತ್ತು ನಡೆಸಲಿದ್ದಾರೆ. ಅವರ  ಈ ಪ್ರಯತ್ನ ಎಷ್ಟು ಯಶಸ್ವಿಯಾಗುತ್ತದೋ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments