Webdunia - Bharat's app for daily news and videos

Install App

ಮೃತ ಯೋಧನ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ಘೋಷಿಸಿದ ಅರವಿಂದ್ ಕೇಜ್ರಿವಾಲ್

Webdunia
ಗುರುವಾರ, 3 ನವೆಂಬರ್ 2016 (20:18 IST)
ಒಆರ್‌ಒಪಿ ಜಾರಿಗೊಳಿಸುವಂತೆ ಒತ್ತಾಯಿಸಿ ಆತ್ಮಹತ್ಯೆಗೆ ಶರಣಾಗಿದ್ದ ನಿವೃತ್ತ ಯೋಧನ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.
 
ಹುತಾತ್ಮನೆಂದು ನಾವು ಕರೆಯುವ ರಾಮಕಿಶನ್ ಗೆರ್ವಾಲ್ ಕುಟುಂಬಕ್ಕೆ 1 ಕೋಟಿ ರೂ ಹಣಕಾಸಿನ ನೆರವು ನೀಡಲಾಗುವುದು ಎಂದು ಕುಟುಂಬದ ಸದಸ್ಯರ ಮುಂದೆ ಕೇಜ್ರಿವಾಲ್ ಘೋಷಿಸಿದರು.  
 
ದೇಶಕ್ಕಾಗಿ ಬದುಕ್ಕಿದ್ದೆ ದೇಶಕ್ಕಾಗಿ ಸಾವನ್ನಪ್ಪುತ್ತಿದ್ದೇನೆ ಎನ್ನುವ ನಿವೃತ್ತ ಯೋಧ ರಾಮಕಿಶನ್ ಗೆರ್ವಾಲ್ ಅವರ ಹೇಳಿಕೆ ಯಾವುದೇ ಹುತಾತ್ಮ ಯೋಧನಿಗಿಂತ ಕಡಿಮೆಯಲ್ಲ ಎಂದು ತಿಳಿಸಿದ್ದಾರೆ. 
 
ಇದೀಗ ಸಂಪೂರ್ಣ ದೇಶವೇ ಒಆರ್‌ಒಪಿ ಜಾರಿಗೊಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತಿದೆ. ನಾವು ಕೂಡಾ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ಹೇಳಿದ್ದಾರೆ.
 
ನಿನ್ನೆ ನಿವೃತ್ತ ಯೋಧ ರಾಮಕಿಶನ್ ಗೆರ್ವಾಲ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೆರಳಿದ್ದಾಗ ದೆಹಲಿ ಪೊಲೀಸರು ಅವರನ್ನು ಬಂಧಿಸಿ ಏಳು ಗಂಟೆಗಳ ಕಾಲ ಬಂಧನಕ್ಕೊಳಗಾಗಿಸಿತ್ತು.  
 
ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧನ ಪುತ್ರ ಜಸ್ವಂತ್ ಮಾತನಾಡಿ, ದೆಹಲಿ ಪೊಲೀಸರು ಅಸಭ್ಯವಾಗಿ ವರ್ತಿಸಿದ್ದಲ್ಲದೇ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments