Webdunia - Bharat's app for daily news and videos

Install App

ದೆಹಲಿ ಎಲ್‌ಜಿಗೆ ಅಧಿಕಾರ: ಹೈಕೋರ್ಟ್ ತೀರ್ಪಿನ ವಿರುದ್ಧ ಕೇಜ್ರಿವಾಲ್ ಸುಪ್ರೀಂಕೋರ್ಟ್ ಮೊರೆ

Webdunia
ಗುರುವಾರ, 1 ಸೆಪ್ಟಂಬರ್ 2016 (10:50 IST)
ರಾಷ್ಟ್ರ ರಾಜಧಾನಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ನಡುವೆ ಜಟಾಪಟಿ ಇನ್ನೂ ಮುಂದುವರಿದಿದೆ. ಎಲ್‌‍ಜಿ ಆಡಳಿತಾತ್ಮಕ ಮುಖ್ಯಸ್ಥ ಎಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಅರವಿಂದ್ ಕೇಜ್ರಿವಾಲ್ ಸರ್ಕಾರ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿದೆ. ಎಎಪಿ ಸಚಿವರ ಸಲಹೆ ಮೇಲೆ ದೆಹಲಿ ಎಲ್‌ಜಿ ಕಾರ್ಯನಿರ್ವಹಿಸಬೇಕು ಎಂಬ ವಾದ ಅರ್ಥಹೀನ ಎಂದು ಆಗಸ್ಟ್ 4 ರಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
 
ಈ ತೀರ್ಪಿನ ಬಳಿಕ ಲೆ. ಗವರ್ನರ್ ನಜೀಬ್ ಜಂಗ್ ಡೆಲ್ಲಿ ಸಿಎಂ ಕೇಜ್ರಿವಾಲ್ ಕುರಿತು ತಮಗೆ ಮರುಕ ಉಂಟಾಗಿದೆಯೆಂದು ಹೇಳಿ, ಸಂವಿಧಾನವನ್ನು ಅವರು ವ್ಯಾಖ್ಯಾನಿಸಿದ ರೀತಿ ಹಾಸ್ಯಾಸ್ಪದ ಎಂದಿದ್ದರು.
 
ಎಎಪಿ ಸರ್ಕಾರ ಎತ್ತಿದ ಎಲ್ಲಾ ವಿಷಯಗಳನ್ನು ಕೋರ್ಟ್ ತಪ್ಪೆಂದು ಘೋಷಿಸಿದ್ದು, ಎಎಪಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದು ನಿಷ್ಫಲ ಪ್ರಯತ್ನ ಎಂದು ಅಭಿಪ್ರಾಯಪಟ್ಟರು.
 
ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾಧಿಕಾರಿಗಳ ನೇಮಕದಲ್ಲಿ ಎಲ್‌ಜಿಗೆ ಸಂಪೂರ್ಣ ಅಧಿಕಾರ ನೀಡುವ ಕೇಂದ್ರ ಸರ್ಕಾರದ ಅಧಿಸೂಚನೆ ವಿರುದ್ಧ ಕೇಜ್ರಿವಾಲ್ ಸರ್ಕಾರ ಹೈಕೋರ್ಟ್ ಮೊರೆ ಹೋಗಿತ್ತು. ಕೇಜ್ರಿವಾಲ್ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ರೋಹಿಣಿ ಮತ್ತು ನ್ಯಾ. ಜಯಂತ್ ನಾಥ್ ಪೀಠ ವಜಾಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments