Select Your Language

Notifications

webdunia
webdunia
webdunia
webdunia

ದಲಿತರು, ಶೋಷಿತರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ: ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್
ಉನಾ(ಗುಜರಾತ್ , ಶುಕ್ರವಾರ, 22 ಜುಲೈ 2016 (10:52 IST)
ಗುಜರಾತ್‌ನ ಉನಾ ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ದಲಿತರ ಕುಟುಂಬಗಳ ಮನೆಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
 
ಕಳೆದ ಜುಲೈ 11 ರಂದು ಸತ್ತ ಗೋವುಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ದಲಿತರ ಮೇಲೆ ಗೋವು ರಕ್ಷಣಾ ಸಮಿತಿಯ ಸದಸ್ಯರು ಸಾರ್ವಜನಿಕವಾಗಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದರು.  
 
ಗುಜರಾತ್‌ನಲ್ಲಿರುವ ಬಿಜೆಪಿ ಸರಕಾರ ದಲಿತ ವಿರೋಧಿ ಸರಕಾರವಾಗಿದೆ. ದಲಿತರನ್ನು ವ್ಯವಸ್ಥಿತವಾಗಿ ಶೋಷಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ದಲಿತರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ದಲಿತರ ಮೇಲೆ ಸಾರ್ವಜನಿಕವಾಗಿ ನಡೆದ ದೌರ್ಜನ್ಯದ ವಿಡಿಯೋ ವೈರಲ್ ಆಗಿದ್ದರಿಂದ ರಾಷ್ಟ್ರಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸತ್ತ ಗೋವುಗಳನ್ನು ಸಾಗಿಸುತ್ತಿರುವ ದಲಿತರನ್ನು ಗೋವು ರಕ್ಷಣೆ ಸಮಿತಿ ಸದಸ್ಯರು ಅರೆನಗ್ನಗೊಳಿಸಿ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ಮಾಡಿದ್ದರು.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ ನಂತರ ಇದೀಗ, ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿ ದೌರ್ಜನ್ಯಕ್ಕೊಳಗಾದವರಿಗೆ ಸಾಂತ್ವನ ಹೇಳಿದ್ದಾರೆ. 

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆ ನಾಶಗೊಳಿಸುತ್ತಿದೆ: ಮಮತಾ