Webdunia - Bharat's app for daily news and videos

Install App

ಚುನಾವಣಾ ಆಯೋಗಕ್ಕೆ ಮೂರು ಬಾಟಲಿ ಕಳುಹಿಸುತ್ತೇನೆ: ಅರವಿಂದ್ ಕೇಜ್ರಿವಾಲ್

Krishnaveni K
ಗುರುವಾರ, 30 ಜನವರಿ 2025 (14:52 IST)
ನವದೆಹಲಿ: ಚುನಾವಣಾ ಆಯೋಗಕ್ಕೆ ಮೂರು ಬಾಟಲಿ ಯಮುನಾ ನದಿ ನೀರನ್ನು ನಾನೇ ಕಳುಹಿಸುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಗೆ ಹರಿದುಬರುವ ಯಮುನಾ ನದಿ ನೀರಿಗೆ ಹರ್ಯಾಣದಲ್ಲಿ ಬಿಜೆಪಿ ನಾಯಕರು ವಿಷ ಬೆರೆಸಿ ಕಳುಹಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಅಷ್ಟೇ ಅಲ್ಲ, ತಮ್ಮ ಪಕ್ಷದ ವತಿಯಿಂದ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ಸುಮ್ಮನೇ ದೂರು ನೀಡಿದರೆ ಸಾಲದು, ಇದಕ್ಕೆ ಪುರಾವೆ ನೀಡಬೇಕು ಎಂದಿತ್ತು. ಹೀಗಾಗಿ ಈಗ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ಮೂರು ಬಾಟಲಿ ಯಮುನಾ ನದಿ ನೀರು ಕಳುಹಿಸುವುದಾಗಿ ಹೇಳಿದ್ದಾರೆ.

ಚುನಾವಣಾ ಆಯೋಗ ಯಾವತ್ತೂ ಈ ರೀತಿ ಪಕ್ಷಪಾತಿಯಾಗಿದ್ದು ನಾನು ನೋಡಿಯೇ ಇಲ್ಲ. ನನಗೆ ಗೊತ್ತು ಅವರು ನನ್ನನ್ನು ಇನ್ನು ಎರಡು ದಿನಗಳಲ್ಲಿ ಜೈಲಿಗೆ ಕಳುಹಿಸುತ್ತಾರೆ. ಅವರು ಮಾಡಲಿ, ಅದಕ್ಕೆಲ್ಲಾ ನಾನು ಹೆದರಲ್ಲ. ನಾನು ಇದೇ ಯಮುನಾ ನದಿ ನೀರನ್ನು ಮೂರು ಬಾಟಲಿಗಳಲ್ಲಿ ಚುನಾವಣಾ ಆಯುಕ್ತರಿಗೆ ಕಳುಹಿಸಿಕೊಡುತ್ತೇನೆ. ಅದನ್ನು ಅವರು ಪತ್ರಿಕಾಗೋಷ್ಠಿಯಲ್ಲೇ ಕುಡಿಯಲಿ. ಚೆನ್ನಾಗಿದೆ ಎಂದರೆ ನಮ್ಮ ತಪ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ’ ಎಂದು ಕೇಜ್ರಿವಾಲ್ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಮುಂದಿನ ಸುದ್ದಿ
Show comments