Webdunia - Bharat's app for daily news and videos

Install App

ಗುಟ್ಟು ಬಿಟ್ಟುಕೊಡದ ಕಮಲ್ ಹಾಸನ್-ಕೇಜ್ರಿವಾಲ್.. ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತಾ..?

Webdunia
ಗುರುವಾರ, 21 ಸೆಪ್ಟಂಬರ್ 2017 (16:31 IST)
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ಮನೆಗೆ ಭೇಟಿ ಮಾತುಕತೆ ನಡೆಸಿದರು. ಕಮಲ್ ಹಾಸನ್ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ ಬೆನ್ನಲ್ಲೇ ನಡೆದ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿತ್ತು. ಆದರೆ, ಕಮಲ್ ಹಾಸನ್ ಎಎಪಿಗೆ ಸೇರುತ್ತಾರಾ..? ಅಥವಾ ಇನ್ಯಾವುದೇ ರಾಜಕೀಯ ಬೆಳವಣಿಗೆಯ ಕುತೂಹಲವನ್ನ ಉಭಯ ನಾಯಕರು ಹಾಗೆ ಇಟ್ಟಿದ್ದಾರೆ.
 

ಭೇಟಿ ಬಳಿಕ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಂಟಿ ಸುದ್ದಿಗೋಷ್ಠಿ ನಡೆಸಿದರೂ ಯಾವುದೇ ನಿರ್ಣಯ ಹೊರಬೀಳಲಿಲ್ಲ. ಕಮಲ್ ಹಾಸನ್ ಧೈರ್ಯ ಮತ್ತು ಸಮಗ್ರತೆಯ ಪ್ರತೀಕ. ದೇಶ ಭ್ರಷ್ಟಾಚಾರ ಮತ್ತು ಕೋಮುವಾದದಂತಹ ಸಮಸ್ಯೆ ಎದುರಿಸುತ್ತಿರುವಾಗ ಸಮಗ್ರತೆ ಮನೋಭಾವದ ಜನರು ಮಾತುಕತೆ ನಡೆಸಬೇಕಾದ ಅಗತ್ಯವಿದೆ. ನಾವಿಬ್ಬರ ಒಂದೊಳ್ಳೆ ಮಾತುಕತೆ ನಡೆಸಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಅರವಿಂದ್ ಕೇಜ್ರಿವಾಲ್ ನನ್ನನ್ನ ಭೇಟಿ ಮಾಡಿದ್ದು ನನಗೆ ದೊಡ್ಡ ಗೌರವ. ನಮ್ಮಿಬ್ಬರ ಭೇಟಿಯ ಏಕೈಕ ಉದ್ದೇಶ ಭ್ರಷ್ಟಾಚಾರ ವಿರೋಧಿ ಹೋರಾಟ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ನಾವಿಬ್ಬರೂ ಮಾತುಕತೆ ನಡೆಸಿದ್ದೇವೆ. ಇದು ನನಗೆ ಕಲಿಯುವಿಕೆಯ ಸಮಯ ಎಂದು ಕಮಲ್ ಹಾಸನ್ ಹೇಳಿದರು. ಆದರೆ, ಮುಂದಿನ ನಡೆ ಏನು ಎಂಬ ಬಗ್ಗೆ ಇಬ್ಬರೂ ನಾಯಕರು ಗುಟ್ಟು ಬಿಟ್ಟು ಕೊಡಲಿಲ್ಲ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments