Webdunia - Bharat's app for daily news and videos

Install App

ಗುಟ್ಟು ಬಿಟ್ಟುಕೊಡದ ಕಮಲ್ ಹಾಸನ್-ಕೇಜ್ರಿವಾಲ್.. ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ಗೊತ್ತಾ..?

Webdunia
ಗುರುವಾರ, 21 ಸೆಪ್ಟಂಬರ್ 2017 (16:31 IST)
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ಮನೆಗೆ ಭೇಟಿ ಮಾತುಕತೆ ನಡೆಸಿದರು. ಕಮಲ್ ಹಾಸನ್ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ ಬೆನ್ನಲ್ಲೇ ನಡೆದ ಈ ಭೇಟಿ ಭಾರೀ ಮಹತ್ವ ಪಡೆದುಕೊಂಡಿತ್ತು. ಆದರೆ, ಕಮಲ್ ಹಾಸನ್ ಎಎಪಿಗೆ ಸೇರುತ್ತಾರಾ..? ಅಥವಾ ಇನ್ಯಾವುದೇ ರಾಜಕೀಯ ಬೆಳವಣಿಗೆಯ ಕುತೂಹಲವನ್ನ ಉಭಯ ನಾಯಕರು ಹಾಗೆ ಇಟ್ಟಿದ್ದಾರೆ.
 

ಭೇಟಿ ಬಳಿಕ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಂಟಿ ಸುದ್ದಿಗೋಷ್ಠಿ ನಡೆಸಿದರೂ ಯಾವುದೇ ನಿರ್ಣಯ ಹೊರಬೀಳಲಿಲ್ಲ. ಕಮಲ್ ಹಾಸನ್ ಧೈರ್ಯ ಮತ್ತು ಸಮಗ್ರತೆಯ ಪ್ರತೀಕ. ದೇಶ ಭ್ರಷ್ಟಾಚಾರ ಮತ್ತು ಕೋಮುವಾದದಂತಹ ಸಮಸ್ಯೆ ಎದುರಿಸುತ್ತಿರುವಾಗ ಸಮಗ್ರತೆ ಮನೋಭಾವದ ಜನರು ಮಾತುಕತೆ ನಡೆಸಬೇಕಾದ ಅಗತ್ಯವಿದೆ. ನಾವಿಬ್ಬರ ಒಂದೊಳ್ಳೆ ಮಾತುಕತೆ ನಡೆಸಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಅರವಿಂದ್ ಕೇಜ್ರಿವಾಲ್ ನನ್ನನ್ನ ಭೇಟಿ ಮಾಡಿದ್ದು ನನಗೆ ದೊಡ್ಡ ಗೌರವ. ನಮ್ಮಿಬ್ಬರ ಭೇಟಿಯ ಏಕೈಕ ಉದ್ದೇಶ ಭ್ರಷ್ಟಾಚಾರ ವಿರೋಧಿ ಹೋರಾಟ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ನಾವಿಬ್ಬರೂ ಮಾತುಕತೆ ನಡೆಸಿದ್ದೇವೆ. ಇದು ನನಗೆ ಕಲಿಯುವಿಕೆಯ ಸಮಯ ಎಂದು ಕಮಲ್ ಹಾಸನ್ ಹೇಳಿದರು. ಆದರೆ, ಮುಂದಿನ ನಡೆ ಏನು ಎಂಬ ಬಗ್ಗೆ ಇಬ್ಬರೂ ನಾಯಕರು ಗುಟ್ಟು ಬಿಟ್ಟು ಕೊಡಲಿಲ್ಲ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments