Webdunia - Bharat's app for daily news and videos

Install App

ಜಡ್ಜ್ ಆಗಿ ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಪ್ರಮಾಣ ವಚನ ಸ್ವೀಕಾರ

Webdunia
ಸೋಮವಾರ, 13 ಫೆಬ್ರವರಿ 2023 (18:52 IST)
ನವದೆಹಲಿ : ನ್ಯಾ. ಅರವಿಂದ್ ಕುಮಾರ್, ನ್ಯಾ. ರಾಜೇಶ್ ಬಿಂದಾಲ್ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಇಬ್ಬರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಇಬ್ಬರು ನ್ಯಾಯಾಧೀಶರ ನೇಮಕದಿಂದ ಸದ್ಯ ಸುಪ್ರೀಂಕೋರ್ಟ್ ನಲ್ಲಿ ಪೂರ್ಣ ಪ್ರಮಾಣ (34) ನ್ಯಾಯಾಧೀಶರ ಹುದ್ದೆ ಭರ್ತಿಯಾಗಿದೆ.

ಹಾಸನ ಮೂಲದ ನ್ಯಾ.ಅರವಿಂದ್ ಕುಮಾರ್ ಅವರನ್ನು ಜೂನ್ 2009 ರಲ್ಲಿ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಿಸಲಾಗಿತ್ತು, ಡಿಸೆಂಬರ್ 2012 ರಲ್ಲಿ ಖಾಯಂ ನ್ಯಾಯಾಧೀಶರಾಗಿ ದೃಢೀಕರಿಸಲಾಯಿತು. ಅಕ್ಟೋಬರ್ 2021 ರಲ್ಲಿ ಗುಜರಾತ್ನ ಗುಜರಾತ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲ್ಪಟ್ಟರು.

ನ್ಯಾ.ರಾಜೇಶ್ ಬಿಂದಾಲ್ ಅವರನ್ನು ಮಾರ್ಚ್ 2006 ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಿಸಲಾಯಿತು ಬಳಿಕ ಅಕ್ಟೋಬರ್ 2021 ರಲ್ಲಿ ಅಲಹಾಬಾದ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments