Webdunia - Bharat's app for daily news and videos

Install App

ರಾಹುಲ್ ಗಾಂಧಿ ಹೇಳಿದಂತೆ ಚೀನಾದಲ್ಲಿ ನಿರುದ್ಯೋಗವೇ ಇಲ್ಲವೇ: ಅಲ್ಲಿ ನಿರುದ್ಯೋಗ ಶೇಕಡಾವಾರು ಎಷ್ಟು

Krishnaveni K
ಮಂಗಳವಾರ, 10 ಸೆಪ್ಟಂಬರ್ 2024 (14:17 IST)
ನವದೆಹಲಿ: ಅಮೆರಿಕಾದ ಟೆಕ್ಸಾಸ್ ವಿವಿಯಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ನಿರುದ್ಯೋಗ ಹೆಚ್ಚಳವಾಗಿದೆ. ಚೀನಾದಲ್ಲಿ ನಿರುದ್ಯೋಗ ಎನ್ನುವುದೇ ಇಲ್ಲ ಎಂದಿದ್ದರು.

ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹಾಗಿದ್ದರೆ ರಾಹುಲ್ ಗಾಂಧಿ ಹೇಳಿದಂತೆ ನಿಜವಾಗಿಯೂ ಚೀನಾದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲವೇ? ಅಲ್ಲಿನ ನಿರುದ್ಯೋಗ ಶೇಕಡಾವಾರು ಮತ್ತು ಭಾರತದಲ್ಲಿ ನಿರುದ್ಯೋಗ ಶೇಕಡಾವಾರು ಎಷ್ಟಿದೆ ಎಂಬ ವಿವರ ಇಲ್ಲಿದೆ ನೋಡಿ.

ಇತ್ತೀಚೆಗಿನ ಅಂಕಿ ಅಂಶದ ಪ್ರಕಾರ ಚೈನಾದಲ್ಲಿ ನಿರುದ್ಯೋಗ ಪ್ರಮಾಣ ಶೇ.5.1 ರಷ್ಟಿದೆ. ಕೇವಲ ಮೂರು ತಿಂಗಳ ಮೊದಲು ಇದು ಶೇ.5 ರಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇದು ಕೊಂಚ ಏರಿಕೆಯಾಗಿದೆ. ಅದರಲ್ಲೂ ಕೆಲವು ಪ್ರಮುಖ ನಗರಗಳಲ್ಲಿ ಶೇ.5.3 ರವರೆಗಿದೆ ಎನ್ನಲಾಗುತ್ತದೆ. 2024 ರಲ್ಲಿ ಚೀನಾದಲ್ಲಿ ನಿರುದ್ಯೋಗ ಪ್ರಮಾಣ ಶೇ.5.30 ರಷ್ಟಿತ್ತು. ಏಪ್ರಿಲ್, ಮೇ ತಿಂಗಳಲ್ಲಿ ಇದು ಕೊಂಚ ಇಳಿಕೆಯಾಗಿ ಶೇ.5 ಕ್ಕೆ ತಲುಪಿತ್ತು. ಆದರೆ ಜುಲೈ ತಿಂಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಶೇ.5.20 ರವರೆಗೆ ತಲುಪಿದೆ. ಹೀಗಾಗಿ ನಿರುದ್ಯೋಗ ಸಮಸ್ಯೆಯೇ ಇಲ್ಲ ಎಂದರೆ ತಪ್ಪಾಗುತ್ತದೆ.

ಆದರೆ ಚೀನಾಗೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗ ಶೇಕಡಾವಾರು ಕೊಂಚ ಹೆಚ್ಚಿದೆ. ಇಲ್ಲಿ 2024 ಜೂನ್ ಅಂಕಿ ಅಂಶದ ಪ್ರಕಾರ ನಿರುದ್ಯೋಗ ಶೇಕಡಾವಾರು 9.2 ಕ್ಕೆ ತಲುಪಿದೆ. ಇದು ಕಳೆದ ಎಂಟು ತಿಂಗಳಲ್ಲೇ ಅಧಿಕವಾಗಿದೆ. 2023 ರಲ್ಲಿ ನಿರುದ್ಯೋಗ ಪ್ರಮಾಣ ಶೇ.8 ರಷ್ಟಿತ್ತು. ಅದೀಗ ಮತ್ತಷ್ಟು ಏರಿಕೆಯಾಗಿದೆ ಎಂಬುದು ಕಳವಳಕಾರಿ ವಿಷಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments