Webdunia - Bharat's app for daily news and videos

Install App

ಮಗುವಿಗೆ ವಿಷಪೂರಿತ ಚಿಪ್ಸ್ ನೀಡಿ ಕೊಂದ ಆಶಾ ಕಾರ್ಯಕರ್ತೆ

Webdunia
ಸೋಮವಾರ, 30 ಅಕ್ಟೋಬರ್ 2017 (15:07 IST)
ಆಂಧ್ರ ಪ್ರದೇಶ: ಆಶಾ ಕಾರ್ಯಕರ್ತೆ ನೀಡಿದ ಚಿಪ್ಸ್ ಸೇವಿಸಿ 4 ವರ್ಷದ ಮಗು ಮೃತಪಟ್ಟಿರುವ ಘಟನೆ ಪ್ರಕಾಶಂ ಜಿಲ್ಲೆಯ ಚೀಮಕುರ್ತಿಯಲ್ಲಿ ನಡೆದಿದೆ.

ಧನಂಜಯ್(4) ಮೃತಪಟ್ಟ ಬಾಲಕ. ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಟವಾಡಲು ಮಗುವನ್ನು ಆಶಾ ಕೇಂದ್ರದಲ್ಲಿ ಬಿಟ್ಟು ಹೋಗಿದ್ದರು. ಆದರೆ ಆಶಾ ಕಾರ್ಯಕರ್ತೆ ಜ್ಯೋತಿ, ಇಲಿ ಪಾಷಾಣ ಸೇರಿಸಿ ಚಿಪ್ಸ್ ನೀಡಿದ್ದಾಳೆ. ಧನಂಜಯ್ ಕೆಟ್ಟ ವಾಸನೆ ಬರುತ್ತಿದೆ ಬೇಡ ಎಂದರೂ, ಜ್ಯೋತಿ ಒತ್ತಾಯಪೂರ್ವಕವಾಗಿ ಮಗುವಿಗೆ ಚಿಪ್ಸ್ ತಿನ್ನಿಸಿದ್ದಾಳೆ ಎಂದು ಅಲ್ಲಿದ್ದ ಮಕ್ಕಳು ಹೇಳಿದ್ದಾರೆ.

ನಮಗೂ ಚಿಪ್ಸ್ ಬೇಕು ಎಂದು ಕೇಳಿದ್ದೆವು. ಆದರೆ ಜ್ಯೋತಿ ಮೇಡಂ ನಮಗೆ ಚಿಪ್ಸ್ ನೀಡಿಲ್ಲ. ಇದನ್ನು ನೀವು ತಿನ್ನುವಂತಿಲ್ಲ ಎಂದು ಮಕ್ಕಳು ಹೇಳಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಧನಂಜಯ್ ಸೋದರ ತರುಣ್ ಕೂಡಾ ಕಳೆದ ವರ್ಷ ಇದೇ ರೀತಿ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ತರುಣ್ ಸಾವಿನಲ್ಲಿ ಜ್ಯೋತಿ ಕೈವಾಡವಿತ್ತಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಮುಂದಿನ ಸುದ್ದಿ
Show comments