Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕೆ ಸೇನಾಧಿಕಾರಿಯನ್ನೇ ಕೊಂದ ಯೋಧ

Webdunia
ಮಂಗಳವಾರ, 18 ಜುಲೈ 2017 (12:52 IST)
ಶ್ರೀನಗರ: ಮೊಬೈಲ್ ಬಳಕೆ ಮಾಡುವ ವಿಚಾರಕ್ಕೆ ಆರಂಭವಾದ ಗಲಾಟೆಯಿಂದಾಗಿ ಸಿಟ್ಟಿಗೆದ್ದ ಭಾರತೀಯ ಸೇನೆ ಯೋಧನೊಬ್ಬ ತನ್ನ ಸೇನಾಧಿಕಾರಿಯನ್ನೇ ಗುಂಡಿಕ್ಕಿ ಹೆತ್ಯೆ ಮಾಡಿರುವ ಘಟನೆ ನಡೆದಿದೆ.
 
ಜಮ್ಮು ಮತ್ತು ಕಾಶ್ಮೀರದ ಬುಚಾರ್ ಪೋಸ್ಟ್ ನಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. 71  ರಾಷ್ಟ್ರೀಯ ರೈಫಲ್ಸ್ ತಂಡದ ಸೇನಾಧಿಕಾರಿಯನ್ನು ಸೈನಿಕ ತನ್ನ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಸೇನಾ ಮೂಲಗಳ ಪ್ರಕಾರ ಅಧಿಕಾರಿಯ ತಪಾಸಣೆ ನಡೆಸಿದಾಗ ಕರ್ತವ್ಯದಲ್ಲಿದ್ದ ಯೋಧ  ಮೊಬೈಲ್​ನಲ್ಲಿ ಮಾತನಾಡುತ್ತಿದ್ದ. ಇದರಿಂದ ಸಿಟ್ಟಿಗೆದ್ದ ಮೇಜರ್ ಶಿಖರ್​ ಅವರು ಯೋಧನಿಂದ ಮೊಬೈಲ್ ಕಿತ್ತುಕೊಂಡು, ಕರ್ತವ್ಯದಲ್ಲಿರುವಾಗ ಫೋನ್ ಬಳಸಬೇಡ ಎಂದು ಖಡಕ್ ಆಗಿ ಹೇಳಿದ್ದಾರೆ.
 
ಇದರಿಂದ ಕ್ರೋಧಗೊಂಡ ಯೋಧ ತನ್ನ ಬಳಿಯಿದ್ದ ಎಕೆ 47 ರೈಫಲ್​ನಿಂದ ಎರಡು ಸುತ್ತು ತನ್ನ ಹಿರಿಯ ಅಧಿಕಾರಿ ಮೇಜರ್ ಶಿಖರ್​ ಅವರತ್ತ ಹಿಂದಿನಿಂದ ಗುಂಡು ಹಾರಿಸಿದ್ದಾನೆ. ಮಾರಣಾಂತಿಕವಾಗಿ ಗಾಯಗೊಂಡ ಮೇಜರ್  ಶಿಖರ್​ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಅವರು ಅಸುನೀಗಿದ್ದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments