Webdunia - Bharat's app for daily news and videos

Install App

ಆಸ್ಸಾಂ ಉಗ್ರರ ದಾಳಿ: 14 ನಾಗರಿಕರ ಮಾರಣಹೋಮ, ಒಬ್ಬ ಉಗ್ರನ ಸಾವು

Webdunia
ಶುಕ್ರವಾರ, 5 ಆಗಸ್ಟ್ 2016 (19:55 IST)
ಶಾಂತಿಯ ನೆಲೆವೀಡಾಗಿದ್ದ ಆಸ್ಸಾಂ ರಾಜ್ಯ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಶಾಂತಿ ಕದಡಿದಂತಾಗಿದೆ. ಇಂದು ಶಂಕಿತ ಎನ್‌ಡಿಎಫ್‌ಬಿ ಉಗ್ರರು ಜನನಿಬಿಡ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.    
 
ಕೋಕ್ರಾಝಾರ್ ಪಟ್ಟಣದಿಂದ ಸುಮಾರು ಮೂರು ಕಿ.ಮೀ ದೂರದಲ್ಲಿರುವ ಬಾಲಾಜನ್ ತಿನಿಯಾಲಿ ಮಾರುಕಟ್ಟೆಗೆ ವ್ಯಾನ್‌ನಲ್ಲಿ ಬಂದ ಉಗ್ರರು ಗ್ರೇನೆಡ್‌ಗಳನ್ನು ಎಸೆದಿದ್ದಲ್ಲದೇ ಗುಂಡಿನ ಸುರಿಮಳೆಗೈದು ಅರಣ್ಯದಲ್ಲಿ ಪರಾರಿಯಾಗಿದ್ದಾರೆ. 
 
ಆಸ್ಸಾ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಹಾಯ್ ಮಾತನಾಡಿ, ಎನ್‌ಡಿಎಫ್‌ಬಿ ಉಗ್ರರ ಕೈವಾಡ ಕಂಡುಬಂದಿದ್ದು, ಉಗ್ರರ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
 
ಇಂದು ಮಧ್ಯಾಹ್ನ 12,30 ಗಂಟೆಗೆ ಉಗ್ರರು ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ 12 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇತರ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಉಗ್ರರ ವಿರುದ್ಧ ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿದಾಗ ಒಬ್ಬ ಉಗ್ರ ಸಾವನ್ನಪ್ಪಿದ್ದು, ಆತನ ಗುರುತು ಪತ್ತೆಯಾಗಿಲ್ಲ ಎಂದು ಡಿಜಿಪಿ ಸಹಾಯ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments