Webdunia - Bharat's app for daily news and videos

Install App

ಅಸ್ಸಾಂ, ಪೊಲೀಸ್‌ ಕೈಯಿಂದ ತಪ್ಪಿಸಿಕೊಂಡು ಕೆರೆಗೆ ಹಾರಿದ ಗ್ಯಾಂಗ್‌ ರೇಪ್ ಆರೋಪಿ: ಊರಿನಲ್ಲಿ ಶವ ಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ

Sampriya
ಶನಿವಾರ, 24 ಆಗಸ್ಟ್ 2024 (16:36 IST)
ಅಸ್ಸಾಂ: ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಇಂದು ಬೆಳಗ್ಗೆ ಪೊಲೀಸ್ ಕೈಯಿಂದ ತಪ್ಪಿಸಿಕೊಂಡು, ಕೆರೆಗೆ ಹಾರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯ ಶವಸಂಸ್ಕಾರಕ್ಕೆ, ಆತನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆರೋಪಿಯ ಕುಟುಂಬವಿರುವ 'ಬೊರ್ಭೆಟಿ' ಗ್ರಾಮಸ್ಥರು, ಆರೋಪಿಯ ಕುಟುಂಬಕ್ಕೆ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದಾರೆ.

ಮೃತ ಆರೋಪಿಯನ್ನು ತಫುಜಾಲ್ ಇಸ್ಲಾಂ ಎಂದು ಗುರುತಿಸಲಾದಗಿದೆ. ಪ್ರಕರಣ ಸಂಬಂಧ ಪೊಲೀಸರು ಸ್ಥಳ ಮಹಜರು ಮಾಡಲೆಂದು  ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಮುಂಜಾನೆ 4 ಗಂಟೆಯ ಸುಮಾರಿಗೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್ ಎಂಬಲ್ಲಿನ ಕೆರೆಗೆ ಹಾರಿದ್ದಾನೆ.

ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಸುಮಾರು ಎರಡು ಗಂಟೆಗಳ ನಂತರ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಹಾಯದಿಂದ ಅವರ ದೇಹವನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

"ಅವರ ವಿಚಾರಣೆಯ ನಂತರ, ಅವರನ್ನು ಅಪರಾಧದ ದೃಶ್ಯ ಮರುಸೃಷ್ಟಿಗಾಗಿ ಕರೆದೊಯ್ಯಲಾಯಿತು. ಅವರನ್ನು ಅಲ್ಲಿಗೆ ಕರೆದೊಯ್ದಾಗ, ಅವರು ಇದ್ದಕ್ಕಿದ್ದಂತೆ ಕಾನ್ಸ್‌ಟೇಬಲ್‌ನ ಹಿಡಿತದಿಂದ ಕೈಕೋಳವನ್ನು ಎಳೆದು ಪರಾರಿಯಾಗಲು ಪ್ರಯತ್ನಿಸಿದರು. ನಂತರ ಅವರು ಹತ್ತಿರದಲ್ಲದ್ದ ಕೆರೆಗೆ ಹಾರಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಮ್ಮ ಕಾನ್‌ಸ್ಟೆಬಲ್‌ಗೂ ಗಾಯಗಳಾಗಿವೆ ಎಂದು ಅವರು ಹೇಳಿದರು.  ಗುರುವಾರ ಸಂಜೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿದ ನಂತರ ಶುಕ್ರವಾರ ಅವರನ್ನು ಬಂಧಿಸಲಾಯಿತು. ಪ್ರಕರಣದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಬಾಲಕಿ ಕೋಚಿಂಗ್ ಕ್ಲಾಸ್ ಮುಗಿಸಿ ಹಿಂತಿರುಗುತ್ತಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.

ಆಕೆ ಅರೆಪ್ರಜ್ಞಾವಸ್ಥೆಯಲ್ಲಿ ಕೊಳದ ಬಳಿ ಆಕೆಯ ಪಕ್ಕದಲ್ಲಿ ತನ್ನ ಸೈಕಲ್‌ನೊಂದಿಗೆ ಪತ್ತೆಯಾಗಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆಬದಿಯಲ್ಲಿದ್ದ ಆಕೆಯನ್ನು ನಿವಾಸಿಗಳು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments