Webdunia - Bharat's app for daily news and videos

Install App

ಡೇರಾ ಬಾಬಾ ನಂತರ ಅಸ್ಸಾರಾಂ ಬಾಪು ಕರಾಳ ಸತ್ಯಗಳು

Webdunia
ಬುಧವಾರ, 30 ಆಗಸ್ಟ್ 2017 (09:49 IST)
ನವದೆಹಲಿ: ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ನಂತೆ ಸ್ವಯಂ ಘೋಷಿತ ದೇವಮಾನವ ಎಂದು ಜನರನ್ನು ಮರಳು ಮಾಡುತ್ತಿದ್ದ ಅಸ್ಸಾರಾಂ ಬಾಪು ಪ್ರಕರಣದ ಸತ್ಯಗಳು ಹೊರಬರುತ್ತಿವೆ.

 
ಡೇರಾ ಬಾಬಾನಂತೆ ಅಸ್ಸಾರಾಂ ಬಾಪು ಕೂಡಾ ಹಲವು ಅತ್ಯಾಚಾರ, ಅಕ್ರಮದಲ್ಲಿ ಭಾಗಿಯಾಗಿದ್ದ. ಈತ ಈಗ ಜೈಲಿನಲ್ಲಿದ್ದಾನೆ. ಆದರೆ ಆತನ ವಿರುದ್ಧ ದೂರು ನೀಡಿದವರು ಕೇಸು ಹಿಂಪಡೆಯಲು ಒತ್ತಡ ಎದುರಿಸುತ್ತಿದ್ದಾರೆಂಬುದು ಬೆಳಕಿಗೆ ಬಂದಿದೆ.

ಈತನ ವಿರುದ್ಧ ಸಾಕ್ಷಿ ಹೇಳಿದವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಇದೀಗ ಉತ್ತರ ಪ್ರದೇಶ ಮೂಲದ ದೂರುದಾರ ಯುವತಿಯ ಕುಟುಂಬದ ಮೇಲೆ ತೀವ್ರ ಒತ್ತಡವಿದೆ.

ಬೇಕೆಂದೇ ಬಾಪು ಕಡೆಯ ವಕೀಲರು ಆರೋಗ್ಯದ ನೆಪವೊಡ್ಡಿ ಕೇಸು ಸುದೀರ್ಘ ಕಾಲಕ್ಕೆ ಎಳೆದಾಡುತ್ತಿದ್ದಾರೆ. ಇದರಿಂದ ನಮ್ಮಂತಹ ಬಡವರಿಗೆ ಕಷ್ಟವಾಗುತ್ತಿದೆ ಎಂದು ಯುವತಿಯ ಕುಟುಂಬದವರು ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಳಲು ತೋಡಿಕೊಂಡಿದ್ದಾರೆ. 2013 ರಲ್ಲಿ ಬಾಪು ಬಂಧನಕ್ಕೊಳಗಾಗಿದ್ದ. ಇದುವರೆಗೆ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ.

ಇದನ್ನೂ ಓದಿ.. ಇಂಗ್ಲೆಂಡ್ ನಲ್ಲಿ ಖಾತೆ ಓಪನ್ ಮಾಡಿದ ಆರ್ ಅಶ್ವಿನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments