Webdunia - Bharat's app for daily news and videos

Install App

ಡೇರಾ ಬಾಬಾ ನಂತರ ಅಸ್ಸಾರಾಂ ಬಾಪು ಕರಾಳ ಸತ್ಯಗಳು

Webdunia
ಬುಧವಾರ, 30 ಆಗಸ್ಟ್ 2017 (09:49 IST)
ನವದೆಹಲಿ: ಡೇರಾ ಸಚ್ಚಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ನಂತೆ ಸ್ವಯಂ ಘೋಷಿತ ದೇವಮಾನವ ಎಂದು ಜನರನ್ನು ಮರಳು ಮಾಡುತ್ತಿದ್ದ ಅಸ್ಸಾರಾಂ ಬಾಪು ಪ್ರಕರಣದ ಸತ್ಯಗಳು ಹೊರಬರುತ್ತಿವೆ.

 
ಡೇರಾ ಬಾಬಾನಂತೆ ಅಸ್ಸಾರಾಂ ಬಾಪು ಕೂಡಾ ಹಲವು ಅತ್ಯಾಚಾರ, ಅಕ್ರಮದಲ್ಲಿ ಭಾಗಿಯಾಗಿದ್ದ. ಈತ ಈಗ ಜೈಲಿನಲ್ಲಿದ್ದಾನೆ. ಆದರೆ ಆತನ ವಿರುದ್ಧ ದೂರು ನೀಡಿದವರು ಕೇಸು ಹಿಂಪಡೆಯಲು ಒತ್ತಡ ಎದುರಿಸುತ್ತಿದ್ದಾರೆಂಬುದು ಬೆಳಕಿಗೆ ಬಂದಿದೆ.

ಈತನ ವಿರುದ್ಧ ಸಾಕ್ಷಿ ಹೇಳಿದವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ, ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಇದೀಗ ಉತ್ತರ ಪ್ರದೇಶ ಮೂಲದ ದೂರುದಾರ ಯುವತಿಯ ಕುಟುಂಬದ ಮೇಲೆ ತೀವ್ರ ಒತ್ತಡವಿದೆ.

ಬೇಕೆಂದೇ ಬಾಪು ಕಡೆಯ ವಕೀಲರು ಆರೋಗ್ಯದ ನೆಪವೊಡ್ಡಿ ಕೇಸು ಸುದೀರ್ಘ ಕಾಲಕ್ಕೆ ಎಳೆದಾಡುತ್ತಿದ್ದಾರೆ. ಇದರಿಂದ ನಮ್ಮಂತಹ ಬಡವರಿಗೆ ಕಷ್ಟವಾಗುತ್ತಿದೆ ಎಂದು ಯುವತಿಯ ಕುಟುಂಬದವರು ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಳಲು ತೋಡಿಕೊಂಡಿದ್ದಾರೆ. 2013 ರಲ್ಲಿ ಬಾಪು ಬಂಧನಕ್ಕೊಳಗಾಗಿದ್ದ. ಇದುವರೆಗೆ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ.

ಇದನ್ನೂ ಓದಿ.. ಇಂಗ್ಲೆಂಡ್ ನಲ್ಲಿ ಖಾತೆ ಓಪನ್ ಮಾಡಿದ ಆರ್ ಅಶ್ವಿನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments