Webdunia - Bharat's app for daily news and videos

Install App

ಒಡಿಶಾದಲ್ಲಿ ಮೆದುಳು ಜ್ವರಕ್ಕೆ 50 ಮಕ್ಕಳು ಬಲಿ

Webdunia
ಶುಕ್ರವಾರ, 14 ಅಕ್ಟೋಬರ್ 2016 (09:25 IST)
ಕಳೆದ ಕೆಲ ವರ್ಷಗಳ ಹಿಂದೆ ಚಿಕೂನ್ ಗನ್ಯಾ ರೋಗದಿಂದ ತತ್ತರಿಸಿದ್ದ ದೇಶ ಈಗ ಮೆದುಳು ಜ್ವರಕ್ಕೆ ತುತ್ತಾಗಿದೆ. ಒಡಿಶಾದಲ್ಲಿ ಇದರ ಪ್ರಭಾವ ಹೆಚ್ಚಿದ್ದು ಮಕ್ಕಳ ಮಾರಣಹೋಮ ನಡೆಯುತ್ತಿದೆ. ರಾಜ್ಯದಲ್ಲಿ ಕಳೆದ 34 ದಿನಗಳಲ್ಲಿ ಒಟ್ಟು 50 ಮಕ್ಕಳು ದುರ್ಮರವನ್ನಪ್ಪಿದ್ದಾರೆ. ಕನಿಷ್ಠ 61 ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ರಾಜ್ಯಾದ್ಯಂತ ಆತಂಕ ಮನೆಮಾಡಿದೆ. 

 
ಮತ್ತೀಗ ನಿದ್ದೆಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ರೋಗ ಹರಡದಂತೆ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ.
 
ಸೊಳ್ಳೆಯಿಂದ ಹರಡುವ ಈ ರೋಗ ಎರಡರಿಂದ 8 ವರ್ಷದೊಳಗಿನ ಮಕ್ಕಳನ್ನು ಹೆಚ್ಚು ಕಾಡುತ್ತದೆ. ಅದರಲ್ಲೂ ಆದಿವಾಸಿಗಳು ಈ ರೋಗದಿಂದ ಹೆಚ್ಚಿನ ಬಾಧೆಗೊಳಗಾಗಿದ್ದಾರೆ. 
 
ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ತ್ವರಿತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. 
 
ರೋಗಿಗಳಿಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ತೆರೆಯಲಾಗಿದೆ. 
 
ಈ ರೋಗ ಜಪಾನ್‌ನಲ್ಲಿ ಮೊದಲು ಕಾಣಿಸಿಕೊಂಡಿದ್ದು ಇದನ್ನು ಜಪಾನೀಸ್ ಎನ್ಸಫಾಲಿಟಿಸ್ ವೈರಸ್ ಎಂದು ಕರೆಯುತ್ತಾರೆ. ಕ್ಯೂಲೆಕ್ಸ್ ಸೊಳ್ಳೆಯಿಂದ ಹರಡುವ ಈ ರೋಗಕ್ಕೆ ಕನ್ನಡದಲ್ಲಿ ಮೆದುಳು ಜ್ವರವೆನ್ನುತ್ತಾರೆ. 
 
ಮಾಲ್ಕನ್‌ಗಿರಿ ಜಿಲ್ಲೆಯ ಹಳ್ಳಿಗಳಲ್ಲಿ ಈ ರೋಗ ವ್ಯಾಪಕವಾಗಿ ಕಾಣಿಸಿಕೊಂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments