Webdunia - Bharat's app for daily news and videos

Install App

ಜೀವಂತವಿರುವ ಮುಖಂಡರ ಹೆಸರಿನಲ್ಲಿ ಅತ್ಯಧಿಕ ಯೋಜನೆಗಳಿಗೆ ವಾಜಪೇಯಿ ನಿದರ್ಶನ

Webdunia
ಬುಧವಾರ, 7 ಸೆಪ್ಟಂಬರ್ 2016 (13:17 IST)
ರಾಜಕೀಯ ಮುಖಂಡರು ಜೀವಂತವಿರುವಾಗಲೇ ಅವರ ಹೆಸರಿನಲ್ಲಿ ಅತ್ಯಧಿಕ ಸಂಖ್ಯೆಯ ಅಧಿಕೃತ ಯೋಜನೆಗಳು ಮತ್ತು ಸಂಸ್ಥೆಗಳಿರುವುದಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿದರ್ಶನವಾಗಿದ್ದಾರೆ. ವರದಿಯೊಂದರ ಪ್ರಕಾರ, ಎರಡು ಅವಧಿಯ ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರು ತಮ್ಮ ಸಾಧನೆಯಲ್ಲಿ ಜವಾಹರಲಾಲ್ ನೆಹರು, ಇಂದಿರಾ ಮತ್ತು ರಾಜೀವ್ ಗಾಂಧಿಯನ್ನು ಹಿಂದಿಕ್ಕಿದ್ದಾರೆ. 
 
ಏನೇ ಆದರೂ, ನೆಹರು-ಗಾಂಧಿ ಮನೆತನವು ಸಜೀವ ಅಥವಾ ಮೃತ ನಾಯಕರ ಹೆಸರಿನಲ್ಲಿರುವ ಯೋಜನೆಗಳು ಮತ್ತು ಸಂಸ್ಥೆಗಳ ಲೆಕ್ಕ ತೆಗೆದುಕೊಂಡರೆ ಉಳಿದೆಲ್ಲಾ ಮುಖಂಡರಿಗಿಂತ ಮುಂದಿದೆ. 2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹತ್ತಾರು ಅಭಿವೃದ್ಧಿ ಮತ್ತು ಜನಕಲ್ಯಾಣ ಯೋಜನೆಗಳಿಗೆ ವಾಜಪೇಯಿ ಹೆಸರು ಇಡಲಾಯಿತು.
 
ಪ್ರಧಾನಮಂತ್ರಿ ಪಿಂಚಣಿ ಯೋಜನೆಯು ಈಗ ಅಟಲ್ ಪಿಂಚಣಿ ಯೋಜನೆಯಾಗಿದ್ದು, ಎನ್‌ಡಿಎನ ಮಹತ್ವದ ಯೋಜನೆಯಾಗಿದೆ. ಸರ್ಕಾರ ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಗೆ ಬದಲಿಯಾಗಿ ಕಳೆದ ವರ್ಷ ಪುನಶ್ಚೇತನ ಮತ್ತು ನಗರ ಪರಿವರ್ತನೆಗೆ ಅಟಲ್ ಯೋಜನೆಗೆ ಚಾಲನೆ ನೀಡಿದೆ.
 
ವಾಜಪೇಯಿ ಅವರಿಗೆ ಕಳೆದ ವರ್ಷ ಭಾರತ ರತ್ನ ನೀಡಲಾಗಿದ್ದು, ಬಿಜೆಪಿ ನೇತೃತ್ವದ ಸರ್ಕಾರ ಅವರ ಹುಟ್ಟುಹಬ್ಬವಾದ ಡಿ. 25ನ್ನು ಶ್ರೇಷ್ಟ ಆಡಳಿತ ದಿನವಾಗಿ ಗುರುತಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಇಸ್ರೇಲ್ ಯುದ್ಧದಲ್ಲಿ ಪಾಕಿಸ್ತಾನಕ್ಕೆ ನಗಲೂ ಆಗದ ಅಳಲೂ ಆಗದ ಸ್ಥಿತಿ

Karnataka Weather: ಈ ವಾರ ಮಳೆಯಿದೆಯೇ, ಎಲ್ಲೆಗೆ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಮುಂದಿನ ಸುದ್ದಿ
Show comments