ಅತಿಶಿ ಮಾರ್ಲೆನಾ ದೆಹಲಿ ನೂತನ ಮುಖ್ಯಮಂತ್ರಿ: ಅರವಿಂದ್ ಕೇಜ್ರಿವಾಲ್ ಆಪ್ತೆಗೆ ಪಟ್ಟ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (12:16 IST)
Photo Credit: Instagram
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾ ಅಧಿಕಾರ ಸ್ವೀಕರಿಸಲಿದ್ದಾರೆ. ಅಬಕಾರಿ ಅಕ್ರಮ ಹಗರಣದಲ್ಲಿ ಸಿಲುಕಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಮೊನ್ನೆಯಷ್ಟೇ ಕೇಜ್ರಿವಾಲ್ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲು ಸೇರಿದ್ದರೂ ಕೇಜ್ರಿವಾಲ್ ತಮ್ಮ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಟ್ಟಿರಲಿಲ್ಲ. ಆದರೆ ಮೊನ್ನೆ ಜಾಮೀನು ನೀಡುವಾಗ ಕೋರ್ಟ್ ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಷರತ್ತು ವಿಧಿಸಿತ್ತು. ಇದರ ಬೆನ್ನಲ್ಲೇ ಕೇಜ್ರಿವಾಲ್ ಎರಡು ದಿನಗಳೊಳಗಾಗಿ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಅದರಂತೆ ಇಂದು ಬೆಳಿಗ್ಗೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮಾರ್ಲೆನಾರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅತಿಶಿ ಹೆಸರನ್ನು ಕೇಜ್ರಿವಾಲ್ ಘೋಷಿಸಿದರು. ಉಳಿದವರು ಅದನ್ನು ಅನುಮೋದಿಸಿದರು.

ಕೇಜ್ರಿವಾಲ್ ಜೈಲಿನಲ್ಲಿದ್ದಾಗಲೂ ಅತಿಶಿ ಸರ್ಕಾರದ ನೇತೃತ್ವ ವಹಿಸಿದ್ದರು. ಕೇಜ್ರಿವಾಲ್ ಅತ್ಯಾಪ್ತೆಯಾಗಿರುವ ಅತಿಶಿ ಈಗ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 43 ವರ್ಷದ ಅತಿಶಿ ಆಕ್ಸ್ ಫರ್ಡ ವಿವಿ ಪದವೀಧರೆ. ಇದುವರೆಗೆ ಕೇಜ್ರಿವಾಲ್ ಸರ್ಕಾರದಲ್ಲಿ ಪಿಡಬ್ಲ್ಯುಡಿ ಮತ್ತು ಪ್ರವಾಸೋದ್ಯಮ ಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments