Webdunia - Bharat's app for daily news and videos

Install App

ವಾದ್ರಾ ಕಚೇರಿ ಮೇಲೆ ಇಡಿ ದಾಳಿ ಪ್ರಕರಣ; ಕೇಂದ್ರ ಸರ್ಕಾರದ ವಿರುದ್ಧ ಕಪಿಲ್ ಸಿಬಲ್ ವಾಗ್ದಾಳಿ

Webdunia
ಭಾನುವಾರ, 9 ಡಿಸೆಂಬರ್ 2018 (07:32 IST)
ನವದೆಹಲಿ : ವಾದ್ರಾ ಕಚೇರಿ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಇದೀಗ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಕಪಿಲ್ ಸಿಬಲ್, ‘ರಾಬರ್ಟ್ ವಾದ್ರಾ ವಿರುದ್ಧ ಯಾವುದೇ ಎಫ್.ಐ.ಆರ್. ದಾಖಲಾಗಿಲ್ಲ. ಆದರೂ ಸತ್ಯಾಂಶದ ಬಗ್ಗೆ ಅಧಿಕಾರಿಗಳೂ ಏನೂ ತಿಳಿಸುತ್ತಿಲ್ಲ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ದರ್ಪ ತೋರಿಸುತ್ತಿದ್ದಾರೆ. ಇಡಿ ಬಿಜೆಪಿ ನಾಯಕರ ಕೈಗೊಂಬೆಯಾಗಿದೆ. ಇಡಿ ಅಧಿಕಾರಿಗಳು ಅನಾವಶ್ಯಕವಾಗಿ ತೊಂದರೆ ಕೊಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಜೈಲಿಗೆ ಕಳುಹಿಸುವ ಅಧಿಕಾರ ಪ್ರಧಾನಿ ಮೋದಿಗೆ ಇಲ್ಲ. ಅದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ. ಪ್ರಧಾನಿ ಮೋದಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆಂಧ್ರ ತೆಲಂಗಾಣ, ಪ.ಬಂಗಾಳದಲ್ಲಿ ಅಧಿಕಾರ ದುರುಪಯೋಗವಾಗುತ್ತಿದೆ. ವಕೀಲ ಮನೋಜ್ ಕುಟುಂಬದವರಿಗೆ ಹಿಂಸೆ ನೀಡಲಾಗುತ್ತಿದೆ. ವಿನಾಕಾರಣ ರಾಬರ್ಟ್ ವಾದ್ರಾ ವಿರುದ್ಧ ತನಿಖೆ ಮಾಡಲಾಗುತ್ತದೆ. ಪದೇ ಪದೇ ವಾದ್ರಾರನ್ನು ಇಡಿ ಅಧಿಕಾರಿಗಳು ಟಾರ್ಗೆಟ್ ಮಾಡ್ತಿದ್ದಾರೆ’ ಎಂದು  ಕಪಿಲ್ ಸಿಬಲ್ ಪ್ರಧಾನಿ ಮೋದಿ  ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments