Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ!

Webdunia
ಮಂಗಳವಾರ, 25 ಜನವರಿ 2022 (13:43 IST)
ನವದೆಹಲಿ : ಸೆಂಟ್ರಲ್ ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 28 ವರ್ಷದ ಆಟೋ ರಿಕ್ಷಾ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
 
ಆರೋಪಿಯನ್ನು ಗೋಪಾಲ್ ಎಂದು ಗುರುತಿಸಲಾಗಿದ್ದು, ಈತ ನ್ಯೂ ಕರ್ದಂಪುರಿ ನಿವಾಸಿಯಾಗಿದ್ದಾನೆ. ಮಹಿಳೆ ಪಶ್ಚಿಮ ಉತ್ತರ ಪ್ರದೇಶದ ಬ್ಯಾಂಕ್ನಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿಯಲ್ಲಿ ತನ್ನ ಪೋಷಕರೊಂದಿಗೆ ಉಳಿದುಕೊಂಡಿದ್ದಾರೆ.

ಘಟನೆ ಕುರಿತಂತೆ ಮಹಿಳೆ ನೀಡಿರುವ ದೂರಿನಲ್ಲಿ, ಆರೋಪಿ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದ ಬಳಿ ಪ್ರಕೃತಿಯ ಕರೆಗೆ ಓಗೊಟ್ಟು ತನ್ನ ವಾಹನವನ್ನು ನಿಲ್ಲಿಸಿದ್ದಾನೆ. ಆದರೆ ನಂತರ ತನನ್ನು ಹಿಡಿದುಕೊಂಡು ಅನುಚಿತವಾಗಿ ವರ್ತಿಸಿದ್ದಾನೆ.

ಕೊನೆಗೆ ಮಹಿಳೆ ಜೋರಾಗಿ ಕಿರುಚಾಡಿದ್ದನ್ನು ಕಂಡು ಆರೋಪಿ ಗಾಬರಿಯಿಂದ ಆಟೋ ಜೊತೆ ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಇದೀಗ ಘಟನೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕ ಗೋಪಾಲ್ ಅವರನ್ನು ಬಂಧಿಸಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ