Select Your Language

Notifications

webdunia
webdunia
webdunia
webdunia

ಸರ್ಕಾರದ ಸ್ವಾಧೀನಕ್ಕಿಲ್ಲ ಅಯೋಧ್ಯಾ ಮಂಟಪ : ಹೈಕೋರ್ಟ್

ಸರ್ಕಾರದ ಸ್ವಾಧೀನಕ್ಕಿಲ್ಲ ಅಯೋಧ್ಯಾ ಮಂಟಪ : ಹೈಕೋರ್ಟ್
ಚೆನ್ನೈ , ಬುಧವಾರ, 27 ಏಪ್ರಿಲ್ 2022 (08:24 IST)
ಚೆನ್ನೈ : ಅಯೋಧ್ಯಾ ಮಂಟಪವನ್ನು ಸ್ವಾಧೀನಪಡಿಸಲು ಹೊರಡಿಸಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

ಇಲ್ಲಿನ ಅಯೋಧ್ಯಾ ಮಂಟಪದ ವ್ಯವಹಾರಗಳನ್ನು ನಿರ್ವಹಿಸುವ ಶ್ರೀರಾಮ ಸಮಾಜದ ವಿರುದ್ಧ ಹಣಕಾಸಿನ ದುರುಪಯೋಗ, ತೆರಿಗೆ ವಂಚನೆ ಮತ್ತು ಇತರ ಅಕ್ರಮಗಳು ನಡೆದಿದೆ ಎನ್ನುವ ಬಗ್ಗೆ ಅನೇಕ ದೂರುಗಳನ್ನು ನ್ಯಾಯಾಲಯ ಸ್ವೀಕರಿಸಿತ್ತು ನಂತರ, ಮಂಟಪದ ಆಡಳಿತವನ್ನು ನಿರ್ವಹಿಸಲು ತಮಿಳುನಾಡು ಸರ್ಕಾರವು ಸೂಕ್ತ ವ್ಯಕ್ತಿ ನೇಮಕ ಮಾಡುವ ನಿರ್ಧಾರ ತೆಗೆದುಕೊಂಡಿತ್ತು. 

ಸದ್ಯ ನ್ಯಾಯಾಲಯವು ಈ ಆರೋಪಗಳ ಬಗ್ಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ತನಿಖೆ ನಡೆಸಲು ಪೂರ್ಣ ಸ್ವಾತಂತ್ರ್ಯ ನೀಡಿದೆ. ವಿಚಾರಣೆ ಮುಗಿಯುವವರೆಗೆ ನ್ಯಾಯಾಲಯವು ಮಂಟಪದ ಸಂಪೂರ್ಣ ನಿಯಂತ್ರಣ ಶ್ರೀರಾಮ ಸಮಾಜಕ್ಕೆ ನೀಡಿದೆ. ಈ ಬಗ್ಗೆ ಬುಧವಾರ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ

ಏಪ್ರಿಲ್ 12 ರಂದು, ಪಶ್ಚಿಮ ಮಾಂಬಲಮ್ನಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಟ್ಟಡವನ್ನು ಸ್ವಾಧೀನಪಡಿಸಿಕೊಂಡಾಗ ಅಯೋಧ್ಯಾ ಮಂಟಪದ ಹೊರಗೆ ಗದ್ದಲ ಉಂಟಾಯಿತು.

ಇಲಾಖೆಯ ಕ್ರಮದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಅಲ್ಲಿ ಯಾವುದೇ ಭಜನೆ ಅಥವಾ ಸತ್ಸಂಗ ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದರು.

ಶ್ರೀರಾಮ ಸಮಾಜದ ವಿರುದ್ಧ ಹಣ ದುರುಪಯೋಗದ ಬಗ್ಗೆ ದೂರುಗಳು ಬಂದಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಸ್ಪಷ್ಟಪಡಿಸಿದ್ದರು. ಅಯೋಧ್ಯಾ ಮಂಟಪವು ಸಾರ್ವಜನಿಕ ದೇವಾಲಯವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ತಿಗೆ ಮೇಲೆ ಆಸೆಗೆ ಯುವಕ ಅಣ್ಣನನ್ನೇ ಕೊಂದ!