Webdunia - Bharat's app for daily news and videos

Install App

ಸೋರುತಿಹುದು ಅಯೋಧ್ಯೆ ರಾಮಮಂದಿರದ ಮಾಳಿಗೆ: ಇಷ್ಟೆಲ್ಲಾ ಪ್ಲ್ಯಾನ್ ಮಾಡಿಯೂ ಹೀಗೇಕಾಯಿತು

Krishnaveni K
ಮಂಗಳವಾರ, 25 ಜೂನ್ 2024 (08:56 IST)
ಅಯೋಧ್ಯೆ: ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆಯ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದಾರೆ.

ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆದ ಐದು ತಿಂಗಳಾಗಿದೆಯಷ್ಟೇ. ಆಗಲೇ ರಾಮಮಂದಿರದ ಮಾಳಿಗೆಯಿಂದ ನೀರು ತೊಟ್ಟಿಕ್ಕುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಜೋರಾಗಿ ಮಳೆ ಬಂದಾಗ ನೀರು ಸೋರುತ್ತಿದೆ. ನೀರು ಹೊರಹೋಗಲು ಜಾಗವೇ ಇಲ್ಲದಾಗಿದೆ ಎಂದು ಸತ್ಯೇಂದ್ರ ದಾಸ್ ಹೇಳಿರುವುದಾಗಿ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

‘ಮೊದಲ ಮಳೆಗೆ ರಾಮ್ ಲಲ್ಲಾನ ಮೂರ್ತಿ ಇರುವ ಮಾಳಿಗೆಯಲ್ಲಿ ನೀರು ತೊಟ್ಟಿಕ್ಕಿತ್ತು. ಈ ಬಗ್ಗೆ ಗಮನಹರಿಸಲೇಬೇಕಿದೆ. ಏನು ಕುಂದು ಕೊರತೆಯಾಗಿದೆ ಎಂಬುದು ತಿಳಿದುಕೊಳ್ಳಬೇಕಿದೆ. ಮಾಳಿಗೆಯಲ್ಲಿ ನಿಲ್ಲುವ ನೀರು ಆರಲು ಅಥವಾ ಹೊರಹೋಗಲು ಜಾಗವೇ ಇಲ್ಲ. ಇದು ಗಂಭೀರವಾದ ವಿಷಯ’ ಎಂದು ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಭಾರೀ ಮಳೆ ಬಂದರೆ ಈಗಲೇ ಮಂದಿರದೊಳಗೆ ಪ್ರಾರ್ಥನೆ ಮಾಡಲು ಕಷ್ಟವಾಗುತ್ತಿದೆ. ಇಷ್ಟೊಂದು ಯೋಜನೆ, ಇಷ್ಟೊಂದು ಇಂಜಿನಿಯರ್ ಗಳು ಪ್ಲ್ಯಾನ್ ಮಾಡಿ ಮಾಡಿರುವ ಕಟ್ಟಡದಲ್ಲಿ ಇಂತಹ ಕೊರತೆ ಕಂಡುಬಂದಿರುವುದು ಯಾಕೆ ಎಂಬುದೇ ಈಗ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments