ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

Krishnaveni K
ಮಂಗಳವಾರ, 25 ನವೆಂಬರ್ 2025 (09:13 IST)
Photo Credit: X
ಅಯೋಧ್ಯೆ: ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಮಹತ್ವದ ದಿನ. ಇಂದು ರಾಮಮಂದಿರದ ಮೇಲೆ ರಘುವಂಶದ ಕೇಸರಿ ಧ್ವಜ ರಾರಾಜಿಸಲಿದೆ. ಪ್ರಧಾನಿ ಮೋದಿ ಭಗವಧ್ವಜಾರೋಹಣ ನೆರವೇರಿಸಲಿದ್ದಾರೆ.

ರಾಮಮಂದಿರದ ಗೋಪುರದ ಮೇಲೆ 22 ಅಡಿ ಎತ್ತರದ ಭಗವಾಧ್ವಜ ರಾರಾಜಿಸಲಿದೆ. ರಾಮಜನ್ಮಭೂಮಿ ಟ್ರಸ್ಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಧಾರ್ಮಿಕ ವಿಧಾನಗಳ ಪ್ರಕಾರ ಧ್ವಜಾರೋಹಣ ನೆರವೇರಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.

ಈ ಕೇಸರಿ ಧ್ವಜಕ್ಕೆ ಅದರದ್ದೇ ಆದ ವಿಶೇಷತೆಯಿದೆ. ರಾಮ ರಾಜ್ಯದ ಸಂದೇಶವುಳ್ಳ ವಿಶೇಷ ಧ್ವಜ ಇದಾಗಿದೆ. ಈ ಧರ್ಮಧ್ವಜ 10 ಅಡಿ ಎತ್ತ, 20 ಅಡಿ ಉದ್ದವಿದೆ. ರಾಮ ಸೂರ್ಯವಂಶದವನು. ಹೀಗಾಗಿ ಧ್ವಜದಲ್ಲಿ ರಾಮನ ಶೌರ್ಯದ ಪ್ರತೀಕವಾದ ಸೂರ್ಯನ ವಿಕಿರಣ, ಸೂರ್ಯನ ಚಿತ್ರ ಹೊಂದಿದೆ. ಅದರ ಮೇಲೆ ಓಂ ಮತ್ತು ಕೋವಿದಾರ ಮರದ ಚಿತ್ರವಿದೆ.

ಈ ಮೂಲಕ ರಾಮಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ. ಈ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ ಮುಖ್ಯ ಗುಡಿ ಕೆಲಸಗಳು ಮಾತ್ರ ಪೂರ್ಣಗೊಂಡಿತ್ತು. ಇದೀಗ ರಾಮಮಂದಿರ ಸಂಪೂರ್ಣ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments