Webdunia - Bharat's app for daily news and videos

Install App

ಅಯೋಧ್ಯೆ ಶ್ರೀರಾಮ ವಿಗ್ರಹಕ್ಕೆ ಶಿಯಾ ವಕ್ಫ್ ಬೋರ್ಡ್ ಬೆಳ್ಳಿ ಬಾಣ ಉಡುಗೊರೆ

Webdunia
ಬುಧವಾರ, 18 ಅಕ್ಟೋಬರ್ 2017 (13:36 IST)
ಉತ್ತರ ಪ್ರದೇಶ: ಸದ್ಯ ಉತ್ತರ ಪ್ರದೇಶ ದೇಶದ ವಿವಾದಿತ ಕೇಂದ್ರ ಬಿಂದುವಾಗಿದೆ. ಇದರ ನಡುವೆ ಅಯೋಧ್ಯೆಯಲ್ಲಿ ಅಚ್ಚರಿಯ ಸಾಮರಸ್ಯದ ಬೆಳವಣಿಗೆಯೊಂದು ನಡೆದಿದೆ. ಸರಯೂ ನದಿ ತೀರದಲ್ಲಿ ಉತ್ತರಪ್ರದೇಶ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ 100 ಮೀಟರ್‌ ಎತ್ತರದ ಶ್ರೀರಾಮನ ವಿಗ್ರಹಕ್ಕೆ ಗೌರವದ್ಯೋತಕವಾಗಿ 10 ಬೆಳ್ಳಿಯ ಬಾಣಗಳನ್ನು ಉಡುಗೊರೆ ನೀಡುವುದಾಗಿ ಶಿಯಾ ಸೆಂಟ್ರಲ್‌ ವಕ್ಫ್ ಬೋರ್ಡ್‌ ಘೋಷಿಸಿದೆ.

ಸರಯೂ ನದಿ ತೀರದಲ್ಲಿ ಶ್ರೀರಾಮ ದೇವರ ವಿಗ್ರಹ ಸ್ಥಾಪಿಸಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಶಿಯಾ ಮಂಡಳಿ, ಈ ನಿರ್ಧಾರ ಪ್ರಶ್ನಾತೀತ. ನಾವು ರಾಮನ ವಿಗ್ರಹಕ್ಕೆ ಬೆಳ್ಳಿಯ ಬಾಣಗಳನ್ನು ನೀಡುತ್ತಿದ್ದೇವೆ. ಇದು ಶಿಯಾ ಸಮುದಾಯಕ್ಕೆ ಶ್ರೀರಾಮನ ಬಗ್ಗೆ ಇರುವ ಗೌರವದ ದ್ಯೋತಕ ಎಂದಿದೆ.

ಈ ಕುರಿತು ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದಿರುವ ವಕ್ಫ್ ಮಂಡಳಿ ಅಧ್ಯಕ್ಷ ವಸೀಂ ರಿಜ್ವಿ, ಶ್ರೀರಾಮನ ವಿಗ್ರಹ ಸ್ಥಾಪಿಸುವುದರಿಂದ ಉತ್ತರಪ್ರದೇಶವು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಡುತ್ತದೆ‌. ಈ ಭಾಗದ ನವಾಬರು ಯಾವಾಗಲೂ ಅಯೋಧ್ಯೆಯ ದೇವಸ್ಥಾನಗಳನ್ನು ಗೌರವಿಸುತ್ತಿದ್ದರು ಎಂದು ಹೇಳಿದ್ದಾರೆ.

ಶ್ರೀರಾಮನ ವಿಗ್ರಹ ನಿರ್ಮಾಣ ಪ್ರಸ್ತಾವವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಜಿಲಾನಿ  ಮತ್ತು ಎಐಎಂಐಎಂ  ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ವಿರೋಧಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments