Webdunia - Bharat's app for daily news and videos

Install App

ಸುಬ್ರಮಣಿಯನ್ ಸ್ವಾಮಿ ಬಿಜೆಪಿ ಉಡುಗೊರೆ ಎಂದ ಆಜಾದ್

Webdunia
ಶುಕ್ರವಾರ, 29 ಏಪ್ರಿಲ್ 2016 (12:40 IST)
ಅಗಸ್ಟಾ ವೆಸ್ಟ್​ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿ ಕೋರ್ಟ್ ನೀಡಿದ ತೀರ್ಪು ಭಾರತದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವುದು ನಿಮಗೆಲ್ಲ ತಿಳಿದಿರುವ ಸಂಗತಿ. ನಿನ್ನೆಯ ರಾಜ್ಯಸಭೆಯ ಕಲಾಪವನ್ನು ಕೂಡ ಅಗಸ್ಟಾ ವೆಸ್ಟ್​ಲ್ಯಾಂಡ್ ಹಗರಣ ನುಂಗಿ ಹಾಕಿತು. 
 
ಬುಧವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ತೆಗೆದುಕೊಂಡ ತಕ್ಷಣವೇ ಸ್ವಾಮಿ ‘ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣ'ದಲ್ಲಿ ಸೋನಿಯಾ ಪಾತ್ರದ ಕುಡಿತು ಮಾತನಾಡಲು ಪ್ರಾರಂಭಿಸಿದ್ದು ಕಾಂಗ್ರೆಸ್ಸಿಗರನ್ನು ಕೆರಳಿಸಿದೆ. ಗುರುವಾರ ಸ್ವಾಮಿ ಮಾತನಾಡಲು ನಿಂತುಕೊಳ್ಳುತ್ತಿದ್ದಂತೆ ಅವರಿಗೆ ಮಾತನಾಡಲು ಅವಕಾಶ ಕೊಡಬಾರದೆಂದು ವಿರೋಧ ಪಕ್ಷದ ನಾಯಕರು ಘೋಷಣೆಗಳನ್ನು ಕೂಗಿದರು. 
 
ಸ್ವಾಮಿ ಮೇಲ್ಮನೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಾರೆ. ಬಿಜೆಪಿಯ ಈ ಹೊಸ ಉಡುಗೊರೆ ಸಂಸತ್ತು ಸರಿಯಾಗಿ ಕಾರ್ಯ ನಿರ್ವಹಿಸಲು ಅವಕಾಶ ಕೊಡುವುದಿಲ್ಲ. ಸಂಸತ್ತಿನಲ್ಲಿ ಇದು ಅವರ ಎರಡನೆಯ ದಿನ. ಈಗಾಗಲೇ ಎರಡು ಬಾರಿ ಅವರ ಪದಬಳಕೆಯನ್ನು ಅಳಿಸಲಾಗಿದೆ. ಮತ್ತೆ ಎಷ್ಟು ಬಾರಿ ಅದನ್ನು ಅಳಿಸಿ ಹಾಕಬೇಕು ಎಂದು ಕಾಂಗ್ರೆಸ್ ಸಂಸದ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಪ್ರಶ್ನಿಸಿದ್ದಾರೆ. 
 
ಸ್ವಾಮಿ ಅವರಿಗೆ ಬೀದಿ ಭಾಷೆ ಮತ್ತು ಸಂಸದೀಯ ಭಾಷೆಯ ನಡುವಿನ ವ್ಯತ್ಯಾಶವೇ ಗೊತ್ತಿಲ್ಲ ಎಂದು ಆಜಾದ್ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments