Webdunia - Bharat's app for daily news and videos

Install App

ಆಜಂ ಖಾನ್‌ಗೆ ಪಕ್ಷ ಒಡೆಯುವ ಪಿತೂರಿ ವಾಸನೆ

Webdunia
ಶುಕ್ರವಾರ, 30 ಡಿಸೆಂಬರ್ 2016 (15:05 IST)
ವಿಧಾನಸಭಾ ಚುನಾವಣೆಗಳನ್ನು ಮುಂದಿಟ್ಟುಕೊಂಡು ಕೆಲವರು ತಮ್ಮ ಪಕ್ಷವನ್ನು ಒಡೆಯಲು ಪಿತೂರಿ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದ ಹಿರಿಯ ನಾಯಕ, ಸಚಿವ ಆಜಂ ಖಾನ್ ಹೇಳಿದ್ದಾರೆ. 
ಒಂದು ಹಮಿ ಮೂತ್ರದಿಂದ ಬಕೆಟ್ ತುಂಬಿದ್ದ ನೀರು ಕಲುಷಿತಗೊಳ್ಳುತ್ತದೆ. ನಮ್ಮ ಪಕ್ಷದ ಜತೆ ಆಗಿದ್ದು ಅದೇ. ಪಕ್ಷದೊಳಗಿನ ಈ ಕೋಲಾಹಲ ಕೇವಲ ಬಿಜೆಪಿಗಾಗುತ್ತದೆ ಎಂದಿದ್ದಾರೆ ಖಾನ್.
 
ಆಡಳಿತಾರೂಢ ಪಕ್ಷ ಎರಡು ಹೋಳಾಗಿ ಒಡೆಯುವ ಸಾಧ್ಯತೆಗಳು ತಲೆದೋರಿರುವುದರ ಹಿನ್ನೆಲೆಯಲ್ಲಿ ಖಾನ್ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಕ್ಷದಲ್ಲಿ ಕೆಲವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಬೆಂಬಲ ವ್ಯಕ್ತ ಪಡಿಸಿದರೆ, ಮತ್ತೆ ಕೆಲವರು ಅಖಿಲೇಶ್ ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಬೆನ್ನಿಗೆ ನಿಂತಿದ್ದಾರೆ. 
 
ಉತ್ತರಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ತಂದೆಯ ವಿರುದ್ಧ ತಿರುಗಿ ಬಿದ್ದಿರುವ 
ಮುಲಾಯಂ ಪುತ್ರ ಅಖಿಲೇಶ್ ಯಾದವ್ ಮುಂಬರುವ ವಿಧಾನ ಸಭಾ ಚುನಾವಣೆಗೆ ತಮ್ಮ ಬೆಂಬಲಿಗರನ್ನೊಳಗೊಂಡ 235 ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ. 
 
ಬುಧವಾರ ಮುಲಾಯಂ ಸಿಂಗ್ ಯಾದವ್ 403 ಸೀಟುಗಳ ಪೈಕಿ  325 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ್ದರು. ಆ ಸಮಯದಲ್ಲಿ ಮುಲಾಯಂ ಸಹೋದರ ಶಿವಪಾಲ್ ಯಾದವ್ ಹಾಜರಿದ್ದರು. ಆದರೆ ಅಖಿಲೇಶ್ ಇರಲಿಲ್ಲ. ಗುರುವಾರ ರಾತ್ರಿ ಶಿವಪಾಲ್ 78 ಅಭ್ಯರ್ಥಿಗಳ ಇನ್ನೊಂದು ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು.
 
ತಂದೆ ತಮ್ಮೊಂದಿಗೆ ಚರ್ಚಿಸದೆ 354 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತ ಪಡಿಸಿದ್ದ ಅಖಿಲೇಶ್ ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತಂದೆಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments