ಕಳೆದ ಐದು ವರ್ಷಗಳ ಹಿಂದೆ ನಗರಕ್ಕೆ ಕರೆತರಲಾಗಿದ್ದ ಬಾಂಗ್ಲಾ ಮೂಲದ 20 ವರ್ಷ ವಯಸ್ಸಿನ ಯುವತಿ ಮೇಲೆ ಕೆಲ ವ್ಯಕ್ಚಿಗಳು ಹಲ್ಲೆ ನಡೆಸಿದ್ದಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ ದಾರುಣ ಘಟನೆ ಕಲ್ಯಾಣ್ ರೈಲ್ವೆ ನಿಲ್ದಾಣದ ಬಳಿ ವರದಿಯಾಗಿದೆ.
ಬಾಂಗ್ಲಾದೇಶದ ಅಭಯ್ ನಗರ್ ನಗರದವಳಾದ ಯುವತಿಯನ್ನು ಐದು ವರ್ಷಗಳ ಹಿಂದೆ ಮಿಥುನ್ ಚಕ್ರವರ್ತಿ ಎನ್ನುವ ವ್ಯಕ್ತಿ ಮುಂಬೈಗೆ ಕರೆದುಕೊಂಡು ಬಂದಿದ್ದನು, ಕೆಲ ದಿನಗಳ ನಂತರ ಆಕೆಯನ್ನು ಜಿಜು ಎಂಬಾತನಿಗೆ ಮಾರಿದ್ದನು.
ಜಿಜು ಮತ್ತು ಇನ್ನೊಬ್ಬ ವ್ಯಕ್ತಿ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದಾರೆ. ಮಧ್ಯರಾತ್ರಿ ಮೂರರಿಂದ ನಾಲ್ಕು ವ್ಯಕ್ತಿಗಳು ಆಕೆ ವಾಸಿಸುತ್ತಿದ್ದ ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.
ಪ್ರಜ್ಞೆ ತಪ್ಪಿ ಬಿದ್ದ ಯುವತಿಯನ್ನು ಪಠಾನ್ಕೋಟ್ ಎಕ್ಸ್ಪ್ರೆಸ್ ರೈಲಿಗೆ ಹತ್ತಿಸಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.