ಗಡಿ ಕಾಯುವ ಸೈನಿಕರ ದುಃಸ್ಥಿತಿ ಬಿಚ್ಚಿಟ್ಟ ವಿಡಿಯೋ

Webdunia
ಮಂಗಳವಾರ, 10 ಜನವರಿ 2017 (09:04 IST)
ನಾವೆಲ್ಲರೂ ಬೆಚ್ಚಗೆ ಮನೆಯೊಳಗೆ ಮಲಗಲು ಕಾರಣ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರು. ನಮಗಾಗಿ ತಮ್ಮ ಜೀವ, ಜೀವನವನ್ನೇ ಮುಡಿಪಾಗಿಡುವ ಸೈನಿಕರ ಬಗ್ಗೆ ಸ್ಪೋಟಕ ವಿಚಾರವೊಂದು ಬಯಲಾಗಿದೆ. ಯೋಧನೊಬ್ಬ ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿರುವ ಸೆಲ್ಫಿ ವಿಡಿಯೋ ಒಂದು ಸೈನಿಕರ ದುಃಸ್ಥಿತಿಯನ್ನು ಬಿಚ್ಚಿಟ್ಟಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. 
 
ಹೌದು ಬಿಎಸ್ಎಫ್ 29 ನೇ ಬೆಟಾಲಿಯನ್ ಯೋಧ ತೇಜ್ ಬಹಾದ್ದೂರ್ ಯಾದವ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಮ್ಮ ದುಃಸ್ಥಿತಿಯನ್ನು ಬಿಚ್ಚಿಟ್ಟಿದ್ದು ಈ ವಿಡಿಯೋ ಈಗ ವೈರಲ್ ಆಗಿ ಹರಿದಾಡುತ್ತಿದೆ. 
 
ಬೆಳಗಿಂದ ಸಂಜೆಯವರೆಗೂ 11-12 ಗಂಟೆಗಳ ಕಾಲ ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ನಿರಂತರವಾಗಿ ಗಡಿ ಕಾಯುತ್ತೇವೆ. ಆದರೆ ನಮಗೆ ನೀಡುವ ಬೆಳಗಿನ ಉಪಹಾರ ಅರಿಶಿಣ ಮಿಶ್ರಿತ ದಾಲ್, ಒಣಗಿದ ಪರೋಟಾ. ನಮಗೆ ಸರಿಯಾದ ಆಹಾರ ಸಿಗುತ್ತಿಲ್ಲ. ಬೆಳಗಿನ ಉಪಹಾರಕ್ಕೆ ಸೀದು ಹೋಗಿರುವ ಆಹಾರವನ್ನು ನೀಡಲಾಗುತ್ತದೆ. ನಮಗೆ ಸಿಗುವ ರೇಷನ್‌ನಲ್ಲೂ ಮೇಲಾಧಿಕಾರಿಗಳ ಗೋಲ್ ಮಾಲ್ ಇರುತ್ತದೆ. ನಮ್ಮ ಪರಿಸ್ಥಿತಿ ಬಗ್ಗೆ ಯಾವುದೇ ಮಾಧ್ಯಮಗಳಲ್ಲಿ ತೋರಿಸಲಾಗುವುದಿಲ್ಲ, ಎಂದು ಸ್ಪೋಟಕ ಸತ್ಯವನ್ನು ಹೊರಹಾಕುವ ಧೈರ್ಯ ತೋರಿದ್ದಾನೆ ಸೈನಿಕ. ಈ ಕುರಿತು ಗಮನ ನೀಡುವಂತೆ ಅವರು ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.
 
ಗಡಿ ಕಾಯುವ ಸೈನಿಕರ ಬಗ್ಗೆ ರಾಜಕಾರಣಿಗಳು ಭಾಷಣದಲ್ಲಿ ಕರುಣಾಜನಕವಾಗಿ ಮಾತನಾಡುತ್ತಾರೆ. ಆದರೆ ಅವರ ದುಃಸ್ಥಿತಿಯ ಬಗ್ಗೆ ಅವರಿಗರಿವಾಗದಿರುವುದು ವಿಪರ್ಯಾಸ. 
 
ನಮ್ಮ ದೇಶವನ್ನು ರಕ್ಷಿಸುವ ಸೈನಿಕರ ಈ ದುಃಸ್ಥಿತಿ ಈಗ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೇಂದ್ರ ಸಚಿವರು ಈ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ಎಫ್ ಯಾದವ್ ಮದ್ಯವ್ಯಸನಿಯಾಗಿದ್ದು, ಅವರಿಗೆ ನಿಯಮಿತ ಆಪ್ತಸಮಾಲೋಚನೆ ಅಗತ್ಯವಿದೆ ಎಂದಿದೆ.
ಗಡಿ ಕಾಯುವ ಸೈನಿಕರ ದುಃಸ್ಥಿತಿ ಬಿಚ್ಚಿಟ್ಟ ವಿಡಿಯೋ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments