Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಆಪ್ ಉದಯಿಸುತ್ತಿರುವುದನ್ನು ಒಪ್ಪಿದ ಬಾದಲ್

Webdunia
ಬುಧವಾರ, 17 ಆಗಸ್ಟ್ 2016 (17:56 IST)
ಪಂಜಾಬ್‌ನಲ್ಲಿ ಆಪ್ ಪ್ರವರ್ಧಮಾನಕ್ಕೆ ಬರುತ್ತಿದೆ ಎಂಬುದನ್ನು ನಿರಾಕರಿಸುತ್ತಲೇ ಬಂದಿದ್ದ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮಂಗಳವಾರ ಯುವ ಪಕ್ಷ ಆಪ್ ರಾಜ್ಯದಲ್ಲಿ ನಾಯಿಕೊಡೆಯಂತೆ ತಲೆ ಎತ್ತುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.
 
ಗೋವಾವನ್ನು ಪೋರ್ಚುಗೀಸರ ಹಿಡಿತದಿಂದ ಬಿಡಿಸುವಾಗ ಸಾವನ್ನಪ್ಪಿದ ಕ್ರಾಂತಿಕಾರಿ ಕರ್ನಲ್ ಸಿಂಗ್ ಇಸ್ಸ್ರು ಅವರ ಹುತಾತ್ಮ ದಿನದ ನಿಮಿತ್ತ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಂಜಾಬ್ ವಿರೋಧಿ, ಸಿಖ್ ವಿರೋಧಿ ಮತ್ತು ರೈತ ವಿರೋಧಿ ಎಂಬುದನ್ನು ಮತದಾರರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.  
 
ಈ ಎರಡು ಪಕ್ಷಗಳನ್ನು ಕುರುಡಾಗಿ ನಂಬಬೇಡಿ. ಇವೆರಡು ರಾಜ್ಯದ ಹಿತಾಸಕ್ತಿಗೆ ಹಾನಿಕಾರಕವಾಗಿದ್ದು, ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿವೆ ಎಂದು ಶಿರೋಮಣಿ ಅಕಾಲಿ ದಳದ ಪ್ರಧಾನರಾಗಿರುವ ಬಾದಲ್ ತಿಳಿಸಿದ್ದಾರೆ. 
 
ರಾಜ್ಯದಲ್ಲಿ ಹುಟ್ಟುತ್ತಿರುವ ಈ ಹೊಸ ಪಕ್ಷ ಪಂಜಾಬ್ ಜನರ ಬಗ್ಗೆ ಒಲವು ಹೊಂದಿಲ್ಲ. ದೆಹಲಿಯ ಆಪ್ ಸರ್ಕಾರ ಎಸ್‌ವೈಎಲ್‌ಗೆ ಸಂಬಂಧಿಸಿದಂತೆ ಸುಪ್ರೀಂನಲ್ಲಿ ಪಂಜಾಬ್ ಹಿತಾಸಕ್ತಿ ವಿರುದ್ಧ ನಿಂತಿದೆ ಎಂದು ಅವರು ಹೇಳಿದ್ದಾರೆ. 
 
ಪಂಜಾಬ್‌ನಲ್ಲಿ ಫೆಬ್ರವರಿ 2017ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಆಪ್ ಪ್ರವರ್ಧಮಾನಕ್ಕೆ ಬರುತ್ತಿರುವುದು ಆಡಳಿತಾರೂಢ ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ  ಸವಾಲಾಗಿ ಪರಿಣಮಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments