Webdunia - Bharat's app for daily news and videos

Install App

ನಾಳೆ ಮಥುರಾದಲ್ಲಿ ನಿಷೇಧಾಜ್ಞೆ ಜಾರಿ!

Webdunia
ಭಾನುವಾರ, 5 ಡಿಸೆಂಬರ್ 2021 (09:46 IST)
ಲಕ್ನೋ  :  ಬಾಬರಿ ಮಸೀದಿ ಧ್ವಂಸಗೊಳಿಸಿದ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಅಯೋಧ್ಯೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಮಥುರಾದಲ್ಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಬಲಪಂಥೀಯ ಗುಂಪುಗಳಾದ ಅಖಿಲ ಭಾರತ ಹಿಂದೂ ಮಹಾಸಭಾ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ ನ್ಯಾಸ್, ನಾರಾಯಣಿ ಸೇನೆ ಮತ್ತು ಶ್ರೀಕೃಷ್ಣ ಮುಕ್ತಿ ದಳಗಳು ಅನುಮತಿ ಕೋರಿದ್ದವು.
ಕೃಷ್ಣನ ಜನ್ಮಸ್ಥಳ ಇಲ್ಲಿನ ಪ್ರಮುಖ ದೇವಾಲಯದ ಸಮೀಪವಿರುವ ಮಸೀದಿಯಲ್ಲಿದೆ ಎಂದು ಹಿಂದೂ ಸಂಘಟನೆಗಳು ವಾದಿಸಿದ್ದವು. ಅದನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ತೀರಸ್ಕರಿಸಿ, ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದಿದ್ದರು. 
ಈ ಹಿನ್ನೆಲೆಯಲ್ಲಿ ಮಥುರಾದಲ್ಲಿ ನಿಷೇಧಾಜ್ಞೆಗಳು ಜಾರಿಗೊಳಿಸಲಾಗಿದೆ. ಜೊತೆಗೆ ಹೆಚ್ಚಿನ ಭದ್ರತೆಗಾಗಿ ಮಥುರಾವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಕತ್ರ ಕೇಶವ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ಪ್ರದೇಶವನ್ನು ಕೆಂಪು ವಲಯ ಎಂದು ಗುರುತಿಸಲಾಗಿದೆ. ಅಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಪ್ರವೇಶ ಕೇಂದ್ರಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments